ಬಲೂಚಿಸ್ತಾನ್: ಪಾಕಿಸ್ತಾನ ನೈರುತ್ಯ ಭಾಗದಲ್ಲಿಂದು ಶಾಲಾ ಬಸ್ ಮೇಲೆ ಆತ್ಮಾಹುತಿ ಕಾರ್ ಬಾಂಬರ್ ದಾಳಿ ನಡೆದಿದ್ದು, ಕನಿಷ್ಠ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬುಲೂಚಿಸ್ತಾನದ ಪ್ರಾಂತ್ಯದ ಖುಜ್ವಾರ್ ಜಿಲ್ಲೆಯ ಬಸ್ ನಗರದಲ್ಲಿ ಶಾಲೆಗೆ ಮಕ್ಕಳನ್ನು ಸಾಗಿಸುತ್ತಿದ್ದಾಗ ಈ ದಾಳಿ ನಡೆದಿದೆ.
ಜನಾಂಗೀಯ ಬಲೂಚ್ ಈ ದಾಳಿ ನಡೆಸಿರುವ ಸಾಧ್ಯತೆ ಇದ್ದು, ಈ ದಾಳಿಯನ್ನು ಪಾಕ್ ಬಲವಾಗಿ ಖಂಡಿಸಿದೆ.
ಇನ್ನು ಬಲೂಚಿಸ್ತಾನದಲ್ಲಿ ಭಾರತದಿಂದಲೇ ಬಾಂಬ್ ದಾಳಿಯಾಗಿದೆ ಎಂದು ಪಾಕ್ ಆರೋಪ ಮಾಡಿದ್ದು, ಪಾಕ್ ಆರೋಪಕ್ಕೆ ಭಾರತ ತಿರುಗೇಟು ನೀಡಿದೆ.
ಈ ಬಗ್ಗೆ ಮಾತನಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, ಖುಜ್ವಾರ್ ಘಟನೆಯಲ್ಲಿ ಭಾರತದ ಕೈವಾಡವಿದೆ ಎಂಬ ಪಾಕಿಸ್ತಾನದ ಆಧಾರ ರಹಿತ ಆರೋಪಗಳನ್ನು ಭಾರತ ತಿರಸ್ಕರಿಸುತ್ತದೆ. ಅಂತಹ ದುರಂತ ಘಟನೆಯಲ್ಲಿ ಆದ ಜೀವಹಾನಿಗೆ ಭಾರತ ಸಂತಾಪ ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…