Bomb threat at Kerala CM Pinarayi Vijayan's residence
ತಿರುವನಂತಪುರಂ: ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ನಿವಾಸಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.
ಪಿಣರಾಯಿ ವಿಜಯನ್ ಅಧಿಕೃತ ನಿವಾಸ ಕ್ಲಿಪ್ ಪೌಸ್ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಬಂದಿದ್ದು, ಪರಿಶೀಲನೆ ನಡೆಸಲಾಗಿದೆ.
ತಂಪನೂರು ಪೊಲೀಸ್ ಠಾಣೆಗೆ ಇ-ಮೇಲ್ ಮೂಲಕ ಸಂದೇಶ ರವಾನಿಸಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಆದರೆ ಮನೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಅಲ್ಲದೇ ಇದೊಂದು ಹುಸಿ ಬಾಂಬ್ ಕರೆ ಎಂದು ದೃಢಪಟ್ಟಿದೆ.
ಬಾಂಬ್ ಬೆದರಿಕೆ ಹಾಕಿರುವ ಆರೋಪಿಗ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…