ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು ಎಂದು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಚಾಟಿ ಬೀಸಿದೆ.
2016ರಿಂದ ಬ್ರಿಟನ್ನಲ್ಲಿ ತಲೆಮರೆಸಿಕೊಂಡಿರುವ ಮಲ್ಯ, ತಮ್ಮನ್ನು ಆರ್ಥಿಕ ಅಪರಾಧಿ ಎಂದು ಗುರುತಿಸಿರುವುದು ಮತ್ತು ಎಫ್ಇಒನ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಒಟ್ಟು ಎರಡು ಅರ್ಜಿಗಳನ್ನು ದಾಖಲಿಸಿದ್ದಾರೆ. ವಂಚನೆ, ಹಣ ಅಕ್ರಮ ವರ್ಗಾವಣೆ ಸೇರಿ ಹಲವು ಪ್ರಕರಣಗಳು ಮಲ್ಯ ವಿರುದ್ಧ ಭಾರತದಲ್ಲಿ ದಾಖಲಾಗಿವೆ. ಮುಖ್ಯ ನ್ಯಾಯಮೂರ್ತಿ ಶ್ರೀ ಚಂದ್ರಶೇಖರ್ ಹಾಗೂ ನ್ಯಾಯಮೂರ್ತಿ ಗೌತಮ್ ಎ. ಅಂಖಡ್ ಅವರ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿ, ನೀವು ಭಾರತಕ್ಕೆ ಬರಲೇಬೇಕು, ಯಾವಾಗ ಬರುತ್ತೀರಿ ಎನ್ನುವುದರ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ ಎಂದು ಮಲ್ಯಗೆ ಕಟ್ಟುನಿಟ್ಟಾಗಿ ಸೂಚಿಸಿದೆ.
ನೀವು ಭಾರತಕ್ಕೆ ಬರದಿದ್ದರೆ, ನಿಮ್ಮ ಅರ್ಜಿಗಳ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಕೋರ್ಟ್ಗೆ ಹಾಜರಾಗುವುದನ್ನು ನೀವು ಉದ್ದೇಶಪೂರ್ವಕವಾಗಿಯೇ ತಪ್ಪಿಸುತ್ತಿದ್ದೀರಿ ಎಂದು ನಾವು ಭಾವಿಸುತ್ತೇವೆ. ಸದ್ಯ ನಿಮ್ಮ ಅರ್ಜಿ ವಜಾಗೊಳಿಸುತ್ತಿಲ್ಲ, ಬದಲಿಗೆ ಇನ್ನೊಂದು ಅವಕಾಶ ಕೊಡುತ್ತಿದ್ದೇವೆ, ಆದರೆ, ಕೋರ್ಟ್ ಪ್ರಕ್ರಿಯೆಯಲ್ಲಿ ನಿಮ್ಮ ಖುದ್ದು ಹಾಜರಾತಿ ಇರಬೇಕು ಎಂದು ನ್ಯಾಯಪೀಠ ತಾಕೀತು ಮಾಡಿತು.
ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…