ದೇಶ- ವಿದೇಶ

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು ಎಂದು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಚಾಟಿ ಬೀಸಿದೆ.

2016ರಿಂದ ಬ್ರಿಟನ್ನಲ್ಲಿ ತಲೆಮರೆಸಿಕೊಂಡಿರುವ ಮಲ್ಯ, ತಮ್ಮನ್ನು ಆರ್ಥಿಕ ಅಪರಾಧಿ ಎಂದು ಗುರುತಿಸಿರುವುದು ಮತ್ತು ಎಫ್‌ಇಒನ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಒಟ್ಟು ಎರಡು ಅರ್ಜಿಗಳನ್ನು ದಾಖಲಿಸಿದ್ದಾರೆ. ವಂಚನೆ, ಹಣ ಅಕ್ರಮ ವರ್ಗಾವಣೆ ಸೇರಿ ಹಲವು ಪ್ರಕರಣಗಳು ಮಲ್ಯ ವಿರುದ್ಧ ಭಾರತದಲ್ಲಿ ದಾಖಲಾಗಿವೆ. ಮುಖ್ಯ ನ್ಯಾಯಮೂರ್ತಿ ಶ್ರೀ ಚಂದ್ರಶೇಖರ್ ಹಾಗೂ ನ್ಯಾಯಮೂರ್ತಿ ಗೌತಮ್ ಎ. ಅಂಖಡ್ ಅವರ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿ, ನೀವು ಭಾರತಕ್ಕೆ ಬರಲೇಬೇಕು, ಯಾವಾಗ ಬರುತ್ತೀರಿ ಎನ್ನುವುದರ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ ಎಂದು ಮಲ್ಯಗೆ ಕಟ್ಟುನಿಟ್ಟಾಗಿ ಸೂಚಿಸಿದೆ.

ನೀವು ಭಾರತಕ್ಕೆ ಬರದಿದ್ದರೆ, ನಿಮ್ಮ ಅರ್ಜಿಗಳ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಕೋರ್ಟ್‌ಗೆ ಹಾಜರಾಗುವುದನ್ನು ನೀವು ಉದ್ದೇಶಪೂರ್ವಕವಾಗಿಯೇ ತಪ್ಪಿಸುತ್ತಿದ್ದೀರಿ ಎಂದು ನಾವು ಭಾವಿಸುತ್ತೇವೆ. ಸದ್ಯ ನಿಮ್ಮ ಅರ್ಜಿ ವಜಾಗೊಳಿಸುತ್ತಿಲ್ಲ, ಬದಲಿಗೆ ಇನ್ನೊಂದು ಅವಕಾಶ ಕೊಡುತ್ತಿದ್ದೇವೆ, ಆದರೆ, ಕೋರ್ಟ್ ಪ್ರಕ್ರಿಯೆಯಲ್ಲಿ ನಿಮ್ಮ ಖುದ್ದು ಹಾಜರಾತಿ ಇರಬೇಕು ಎಂದು ನ್ಯಾಯಪೀಠ ತಾಕೀತು ಮಾಡಿತು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

35 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago