ದೇಶ- ವಿದೇಶ

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು ಎಂದು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಚಾಟಿ ಬೀಸಿದೆ.

2016ರಿಂದ ಬ್ರಿಟನ್ನಲ್ಲಿ ತಲೆಮರೆಸಿಕೊಂಡಿರುವ ಮಲ್ಯ, ತಮ್ಮನ್ನು ಆರ್ಥಿಕ ಅಪರಾಧಿ ಎಂದು ಗುರುತಿಸಿರುವುದು ಮತ್ತು ಎಫ್‌ಇಒನ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಒಟ್ಟು ಎರಡು ಅರ್ಜಿಗಳನ್ನು ದಾಖಲಿಸಿದ್ದಾರೆ. ವಂಚನೆ, ಹಣ ಅಕ್ರಮ ವರ್ಗಾವಣೆ ಸೇರಿ ಹಲವು ಪ್ರಕರಣಗಳು ಮಲ್ಯ ವಿರುದ್ಧ ಭಾರತದಲ್ಲಿ ದಾಖಲಾಗಿವೆ. ಮುಖ್ಯ ನ್ಯಾಯಮೂರ್ತಿ ಶ್ರೀ ಚಂದ್ರಶೇಖರ್ ಹಾಗೂ ನ್ಯಾಯಮೂರ್ತಿ ಗೌತಮ್ ಎ. ಅಂಖಡ್ ಅವರ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿ, ನೀವು ಭಾರತಕ್ಕೆ ಬರಲೇಬೇಕು, ಯಾವಾಗ ಬರುತ್ತೀರಿ ಎನ್ನುವುದರ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ ಎಂದು ಮಲ್ಯಗೆ ಕಟ್ಟುನಿಟ್ಟಾಗಿ ಸೂಚಿಸಿದೆ.

ನೀವು ಭಾರತಕ್ಕೆ ಬರದಿದ್ದರೆ, ನಿಮ್ಮ ಅರ್ಜಿಗಳ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಕೋರ್ಟ್‌ಗೆ ಹಾಜರಾಗುವುದನ್ನು ನೀವು ಉದ್ದೇಶಪೂರ್ವಕವಾಗಿಯೇ ತಪ್ಪಿಸುತ್ತಿದ್ದೀರಿ ಎಂದು ನಾವು ಭಾವಿಸುತ್ತೇವೆ. ಸದ್ಯ ನಿಮ್ಮ ಅರ್ಜಿ ವಜಾಗೊಳಿಸುತ್ತಿಲ್ಲ, ಬದಲಿಗೆ ಇನ್ನೊಂದು ಅವಕಾಶ ಕೊಡುತ್ತಿದ್ದೇವೆ, ಆದರೆ, ಕೋರ್ಟ್ ಪ್ರಕ್ರಿಯೆಯಲ್ಲಿ ನಿಮ್ಮ ಖುದ್ದು ಹಾಜರಾತಿ ಇರಬೇಕು ಎಂದು ನ್ಯಾಯಪೀಠ ತಾಕೀತು ಮಾಡಿತು.

ಆಂದೋಲನ ಡೆಸ್ಕ್

Recent Posts

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

41 mins ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

2 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

2 hours ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

2 hours ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

5 hours ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

5 hours ago