ದೇಶ- ವಿದೇಶ

ಇರಾನ್‌ ಯುದ್ಧಕ್ಕೆ ಬ್ರೇಕ್‌ : ಯುಎಸ್‌ ಹೌಸ್‌ ನಿರ್ಣಯ ಅಂಗೀಕಾರ, ಟ್ರಂಪ್‌ಗೆ ಭಾರಿ ಹಿನ್ನಡೆ

ವಾಷಿಂಗ್ಟನ್‌ : ಇರಾನ್‌ ವಿರುದ್ಧದ ಯುದ್ಧವನ್ನು ಡೊನಾಲ್ಡ್‌ ಟ್ರಂಪ್‌ ಮುಂದುವರಿಸದಂತೆ ತಡೆಯಲು ರಿಪಬ್ಲಿಕನ್‌ ನೇತೃತ್ವದ ಅಮೆರಿಕದ ಹೌಸ್‌ ಆಫ್‌ ರೆಪ್ರೆಸೆಂಟೀಟಿವ್ಸ್‌ (ಕೆಳಮನೆ) ನಿರ್ಣಯವೊಂದನ್ನು ಅಂಗೀಕರಿಸಿದೆ.

ಹೌಸ್‌ ಫಾರಿನ್‌ ಅಫೇರ್ಸ್‌ ಕಮಿಟಿಯ ಸದಸ್ಯ, ನ್ಯೂಯಾರ್ಕ್‌ ಸಂಸದ ಗ್ರೆಗೊರಿ ಮೀಕ್ಸ್‌ ಅವರು ನಿರ್ಣಯವನ್ನು ಮಂಡಿಸಿದ್ದರು.

ಇರಾನ್ ವಿರುದ್ಧ ಅನುಮತಿ ಇಲ್ಲದೆ ಯುದ್ಧ ನಡೆಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧಿಕಾರವನ್ನು ಮಿತಿಗೊಳಿಸುವ ನಿರ್ಣಯವನ್ನು ಅಮೆರಿಕದ ಪ್ರತಿನಿಧಿ ಸಭೆ ಅಂಗೀಕರಿಸಿದೆ. ಬುಧವಾರ ನಡೆದ ಮತದಾನದಲ್ಲಿ 215-208 ಅಂತರದಿಂದ ಈ ನಿರ್ಣಯ ಅಂಗೀಕೃತವಾಯಿತು. ನಾಲ್ವರು ರಿಪಬ್ಲಿಕನ್ ಸದಸ್ಯರು ಡೆಮಾಕ್ರಟಿಕ್ ಪಕ್ಷದೊಂದಿಗೆ ಕೈಜೋಡಿಸಿದ್ದು ಟ್ರಂಪ್‌ಗೆ ತೀವ್ರ ಹಿನ್ನಡೆಯಾಗಿದೆ.

ಏನಿದು ವಿವಾದ?
ಫೆಬ್ರವರಿ 28ರಂದು ಇಸ್ರೇಲ್ ಜೊತೆಗೂಡಿ ಟ್ರಂಪ್ ಇರಾನ್ ಮೇಲೆ ದಾಳಿ ನಡೆಸಿದ್ದರು. ಕಾಂಗ್ರೆಸ್ ಅನುಮೋದನೆ ಪಡೆಯದೆ ನಡೆದ ಈ ದಾಳಿ 100ನೇ ದಿನಕ್ಕೆ ಕಾಲಿಡುತ್ತಿದೆ. ಟ್ರಂಪ್ ಇದನ್ನು “ಸಣ್ಣ ಘರ್ಷಣೆ” ಎಂದು ಬಣ್ಣಿಸಿದ್ದರು. ಆದರೆ ಸಂವಿಧಾನದ ಪ್ರಕಾರ ಯುದ್ಧ ಘೋಷಿಸುವ ಅಧಿಕಾರ ಕಾಂಗ್ರೆಸ್‌ಗೆ ಮಾತ್ರ ಇದೆ.

ಯುದ್ಧ ಅಧಿಕಾರ ಕಾಯ್ದೆ 1973:
ಈ ಕಾಯ್ದೆಯ ಪ್ರಕಾರ ಅಧ್ಯಕ್ಷರು ಮಿಲಿಟರಿ ಕಾರ್ಯಾಚರಣೆ ಆರಂಭಿಸಿದ 48 ಗಂಟೆಯೊಳಗೆ ಕಾಂಗ್ರೆಸ್‌ಗೆ ಮಾಹಿತಿ ನೀಡಬೇಕು. 60 ದಿನಗಳವರೆಗೆ ಮಾತ್ರ ಕಾಂಗ್ರೆಸ್ ಅನುಮತಿ ಇಲ್ಲದೆ ಯುದ್ಧ ಮುಂದುವರಿಸಬಹುದು. ನಂತರ 30 ದಿನ ವಿಸ್ತರಣೆ ಅಥವಾ ಕಾಂಗ್ರೆಸ್ ಅನುಮೋದನೆ ಕಡ್ಡಾಯ.

ಮುಂದೇನು?
ಈ ನಿರ್ಣಯ ರಿಪಬ್ಲಿಕನ್ ಬಹುಮತದ ಸೆನೆಟ್‌ನಲ್ಲೂ ಅಂಗೀಕಾರವಾಗಬೇಕು. ಬಳಿಕ ಎರಡೂ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತ ಪಡೆದರೆ ಮಾತ್ರ ಟ್ರಂಪ್ ಅವರ ನಿರೀಕ್ಷಿತ ವೀಟೋವನ್ನು ರದ್ದುಪಡಿಸಲು ಸಾಧ್ಯ.

ಈ ವರ್ಷ ಸೆನೆಟ್‌ನಲ್ಲಿ ಇದೇ ರೀತಿಯ 7 ಪ್ರಯತ್ನಗಳನ್ನು ರಿಪಬ್ಲಿಕನ್ನರು ತಡೆದಿದ್ದರು. ಪ್ರತಿನಿಧಿ ಸಭೆಯಲ್ಲೂ 3 ಬಾರಿ ಯುದ್ಧ ಅಧಿಕಾರ ನಿರ್ಣಯಗಳು ಸೋತಿದ್ದವು. ಆದರೆ ಈ ಬಾರಿ ಮೊದಲ ಬಾರಿಗೆ ನಿರ್ಣಯ ಯಶಸ್ವಿಯಾಗಿದೆ.

ಫೆಬ್ರವರಿಯಲ್ಲಿ ಆರಂಭವಾದ ಅಮೆರಿಕ-ಇಸ್ರೇಲ್ ಇರಾನ್ ಯುದ್ಧ ಜಾಗತಿಕ ಇಂಧನ ಮಾರುಕಟ್ಟೆ ಹಾಗೂ ಅಮೆರಿಕದಲ್ಲಿ ಜೀವನ ವೆಚ್ಚದ ಮೇಲೆ ದುಷ್ಪರಿಣಾಮ ಬೀರುತ್ತಿರುವುದರಿಂದ ಟ್ರಂಪ್ ಮೇಲೆ ಒತ್ತಡ ಹೆಚ್ಚುತ್ತಿದೆ.

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

8 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

8 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

9 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

10 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

10 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

13 hours ago