ದೇಶ- ವಿದೇಶ

ಲಂಚ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ ಐಎಎಸ್‌ ಅಧಿಕಾರಿ ಮಂಜುನಾಥ್‌

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಈಚೆಗೆ ಕರ್ನಾಟಕ ಹೈಕೋರ್ಟ್‌ “ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಕ್ಕೆ ಲಂಚ ಪಡೆಯುವುದು ನಿಯಮವಾಗಿದೆ. ಇದು ಕ್ಯಾನ್ಸರ್‌ಗಿಂತ ಅತ್ಯಂತ ಗಂಭೀರ ರೋಗ” ಎಂದು ಮಂಜುನಾಥ್‌ ಅವರ ಜಾಮೀನು ಮನವಿ ವಜಾ ಮಾಡುವ ವೇಳೆ ಹೇಳಿತ್ತು.

ಸರ್ವೋಚ್ಚ ನ್ಯಾಯಾಲಯದಲ್ಲಿ ಜಾಮೀನು ಕೋರಿ ನೂಲಿ ಮತ್ತು ನೂಲಿ ಸಂಸ್ಥೆಯ ಮೂಲಕ ಸಲ್ಲಿಸಲಾಗಿರುವ ವಿಶೇಷ ಮನವಿಯು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಜಾಮೀನು ನೀಡಲು ನಿರಾಕರಿಸಿ 2022ರ ಆಗಸ್ಟ್‌ 3ರಂದು ಆದೇಶಿಸಿರುವ ಕರ್ನಾಟಕ ಹೈಕೋರ್ಟ್‌ ತೀರ್ಪು ಮತ್ತು ಭ್ರಷ್ಟಾಚಾರ ನಿಗ್ರಹ ದಳವು ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಲಾಗಿದೆ.

ಭೂವಿವಾದಕ್ಕೆ ಸಂಬಂಧಿಸಿದ ಆದೇಶದ ದಾಖಲೆಯನ್ನು ಮೇಲ್ಮನವಿ ವಿಭಾಗದಲ್ಲಿ ವಶ ಪಡೆಸಿಕೊಳ್ಳಲಾಗಿದೆಯೇ ವಿನಾ ಮಂಜುನಾಥ್‌ ಅವರ ಕಚೇರಿಯಲ್ಲಿ ಅಲ್ಲ. ಆದೇಶ ಅಂತಿಮಗೊಂಡ ಬಳಿಕ ಅದಕ್ಕೆ ಸಹಿ ಮಾಡಿ, ಸಾಮಾನ್ಯ ನ್ಯಾಯಾಲಯದ ದಿನಗಳಲ್ಲಿ ಆದೇಶ ಓದಲಾಗುತ್ತದೆ. ಇದಕ್ಕೂ ಮುನ್ನ, ಆದೇಶ ಕರಡು ಸಿದ್ಧಪಡಿಸಿ ಅದನ್ನು ಕಾನೂನು ವಿಭಾಗಕ್ಕೆ ಕಳುಹಿಸಿ ಪರಿಶೀಲಿಸಲಾಗುತ್ತದೆ. ಈ ಪ್ರಕ್ರಿಯೆಯು ಕಾಲಾವಕಾಶ ಹಿಡಿಯುತ್ತದೆ. ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಕಾಯ್ದಿರಿಸಲಾದ ಆದೇಶಗಳನ್ನು ಪ್ರಕಟಿಸಲಾಗಿದೆ. ಮಾರ್ಚ್‌ನಲ್ಲಿ ಕಾಯ್ದಿರಿಸಲಾಗಿದ್ದ ಆದೇಶಗಳನ್ನು ಕೈಗೆತ್ತಿಕೊಳ್ಳಲಾಗಿರಲಿಲ್ಲ. ಹೀಗಾಗಿ, ಹಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕರಡು ಆದೇಶ ಸಿದ್ಧಪಡಿಸಿರಲಿಲ್ಲ ಎಂದು ಮಂಜುನಾಥ್‌ ಅವರ ಮನವಿಯಲ್ಲಿ ಜಾಮೀನು ಕೋರಿಕೆಗೆ ಕಾರಣ ನೀಡಲಾಗಿದೆ.

ಮುಂದುವರಿದು, ಜಿಲ್ಲಾಧಿಕಾರಿ ಅಡಿ 36 ಇಲಾಖೆಗಳು ಬರುತ್ತವೆ. ಹಲವಾರು ಜವಾಬ್ದಾರಿಗಳನ್ನು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಡಿಸಿ ಅವರು ನಿಭಾಯಿಸಬೇಕಾಗುತ್ತದೆ. ಈ ಪೈಕಿ ಕಂದಾಯ ವಿಚಾರಗಳಿಗೆ ಸಂಬಂಧಿಸಿದಂತೆ ಕಲಾಪ ನಡೆಸುವುದೂ ಸೇರಿದೆ. ಹೀಗಾಗಿ, ಜನವರಿ ಮತ್ತು ಫೆಬ್ರವರಿಯಲ್ಲಿ ನಡೆಸಿದ್ದ ಕಲಾಪಗಳಿಗೆ ಸಂಬಂಧಿಸಿದ ಆದೇಶ ಮಾಡಲಾಗಿದೆಯೇ ವಿನಾ ಮಾರ್ಚ್‌ನಲ್ಲಿನ ಪ್ರಕರಣಗಳ ಕುರಿತು ಆದೇಶ ಮಾಡಲು ಮುಂದಾಗಿರಲಿಲ್ಲ ಎಂದು ವಿವರಿಸಲಾಗಿದೆ.

ಎಸಿಬಿ ಸೃಷ್ಟಿಸಿದ್ದ ಟ್ರ್ಯಾಪ್‌ನಲ್ಲಿ ಮಂಜುನಾಥ್‌ ಅವರು ಸಿಲುಕಿರಲಿಲ್ಲ. ಈ ವಿಚಾರವನ್ನು ಟ್ರ್ಯಾಪ್‌ ನಡೆಸಲಾದ ದಿನವೇ ದೂರುದಾರ ಅಜಂ ಪಾಷಾ ಅವರು ಎಸಿಬಿ ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಈ ಸಂಬಂಧದ ವಿಡಿಯೊ ಎಸಿಬಿ ಬಳಿ ಇದ್ದು, ಅದನ್ನು ಇಲ್ಲಿಯವರೆಗೆ ಉದ್ದೇಶಪೂರ್ವಕವಾಗಿ ಪೀಠಕ್ಕೆ ಸಲ್ಲಿಸಲಾಗಿಲ್ಲ ಎಂದು ಆಕ್ಷೇಪಿಸಲಾಗಿದೆ.

ಲಂಚಕ್ಕೆ ಬೇಡಿಕೆ ಇಟ್ಟ ಮೊದಲನೇ ಆರೋಪಿಯಾಗಿರುವ ಉಪ ತಹಶೀಲ್ದಾರ್‌ ಪಿ ಎಸ್‌ ಮಹೇಶ್‌ ಅವರಿಗೆ ಜಾಮೀನು ಸಿಕ್ಕಿದೆ. ಎರಡನೇ ಆರೋಪಿಯಾಗಿರುವ ಚಂದ್ರುವಿಗೂ ಜಾಮೀನು ಸಿಕ್ಕಿದೆ. ಹೀಗಾಗಿ, ತಮಗೂ ಜಾಮೀನು ನೀಡಬೇಕು ಎಂದು ಮೂರನೇ ಆರೋಪಿಯಾಗಿರುವ ಮಂಜುನಾಥ್‌ ಕೋರಿದ್ದಾರೆ. ಎಸಿಬಿಯು ನಿಯಮದ ಪ್ರಕಾರ 60 ದಿನಗಳ ಒಳಗೆ ಆರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಮಹೇಶ್‌ ಅವರಿಗೆ ಸೆಷನ್ಸ್‌ ನ್ಯಾಯಾಲಯವು ಡಿಫಾಲ್ಟ್‌ ಜಾಮೀನು ಮಂಜೂರು ಮಾಡಿತ್ತು ಎಂಬುದನ್ನು ಇಲ್ಲಿ ನೆನೆಯಬಹುದಾಗಿದೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಆಗಸ್ಟ್‌ 3ರಂದು ಮಂಜುನಾಥ್‌ ಅವರ ಜಾಮೀನು ಮನವಿ ವಜಾ ಮಾಡಿತ್ತು. ಇದಕ್ಕೂ ಮುನ್ನ, ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ ಲಕ್ಷ್ಮಿನಾರಾಯಣ ಭಟ್‌ ಅವರು ಜುಲೈ 11ರಂದು ಮಂಜುನಾಥ್‌ ಅವರ ಜಾಮೀನು ಮನವಿಯನ್ನು ವಜಾಗೊಳಿಸಿದ್ದರು. ಜುಲೈ ೪ರಂದು ಮಂಜುನಾಥ್‌ ಅವರನ್ನು ಎಸಿಬಿಯು ಬಂಧಿಸಿದ್ದು, ಅಂದಿನಿಂದಲೂ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಆನೇಕಲ್‌ ತಾಲ್ಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾಷಾ ಎಂಬುವರಿಂದ 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ತಹಶೀಲ್ದಾರ್‌ ಆಗಿದ್ದ ಪಿ ಎಸ್‌ ಮಹೇಶ್‌ ಮತ್ತು ನ್ಯಾಯಾಲಯ ವಿಭಾಗದ ಸಹಾಯಕ ಚೇತನ್‌ ಕುಮಾರ್‌ ಅಲಿಯಾಸ್‌ ಚಂದ್ರು ಅವರನ್ನು ಮೇ 21ರಂದು ಎಸಿಬಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಮಂಜುನಾಥ್‌ ಮೂರನೇ ಆರೋಪಿಯಾಗಿದ್ದಾರೆ.

andolana

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

37 mins ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

39 mins ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

41 mins ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

3 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

3 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

3 hours ago