ಲಂಡನ್ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಆಯೋಜಿಸುವುದಕ್ಕೆ ಬ್ರಿಟನ್ ಮುಂದೆ ಬಂದಿದೆ.
ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಈ ಕುರಿತು 35ಕ್ಕೂ ಹೆಚ್ಚು ರಾಷ್ಟ್ರಗಳ ಜೊತೆ ಸಭೆ ನಡೆಸುವುದಾಗಿ ಘೋಷಿಸಿದ್ದಾರೆ.
ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದಿಂದಾಗಿ ಹೊರ್ಮುಜ್ ಜಲಸಂಧಿಯು ಇರಾನ್ ಪಡೆಗಳಿಂದ ಮುಚ್ಚಲ್ಪಟ್ಟಿದೆ. ಪ್ರಪಂಚದ ಸುಮಾರು ಒಂದು ಐದನೇ ಒಂದು ಭಾಗದ ತೈಲ ಸಾಗಣೆಯು ಈ ಜಲಸಂಧಿಯ ಮೂಲಕ ನಡೆಯುತ್ತದೆ. ಇದರ ಮುಚ್ಚುವಿಕೆಯು ಜಾಗತಿಕ ತೈಲ ಬೆಲೆಗಳಲ್ಲಿ ಏರಿಕೆ ಮತ್ತು ಆರ್ಥಿಕ ಅಸ್ಥಿರತೆಗೆ ಕಾರಣವಾಗಿದೆ.
“ವಾಸ್ತವಿಕ ಮತ್ತು ಸಾಮೂಹಿಕ ಯೋಜನೆ” ರೂಪಿಸುವ ಉದ್ದೇಶದೊಂದಿಗೆ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಬ್ರಿಟನ್ ಆಯೋಜಿಸುವುದಕ್ಕೆ ಮುಂದಾಗಿದೆ. ಈ ಸಮ್ಮೇಳನವು ಲಂಡನ್ನಲ್ಲಿ ನಡೆಯಲಿದೆ.
ಈ ಕುರಿತು ಮಾತನಾಡಿರುವ ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್, ಹೊರ್ಮುಜ್ ಜಲಸಂಧಿಯನ್ನು ಹೇಗೆ ತೆರೆಯಬೇಕಂಬ ಕುರಿತಂತೆ ಚರ್ಚಿಸಲು ಈ ವಾರ 35 ದೇಶಗಳ ಸಭೆ ಕರೆಯಲಾಗುವುದು. ಜತೆಗೆ ಸಾಗರದಲ್ಲಿ ಸಿಲುಕಿರುವ ಹಡಗುಗಳು ಮತ್ತು ನಾವಿಕರ ಸುರಕ್ಷತೆ ಹಾಗೂ ಜಲಸಂಧಿಯ ಸಂಚಾರ ಸ್ವಾತಂತ್ರ್ಯವನ್ನ ಮರುಸ್ಥಾಪಿಸಲು ಸಾಧ್ಯವಿರು ರಾಜತಾಂತ್ರಿಕ ಸಮಾಲೋಚನೆ ನಡೆಸಲಿದ್ದೇವೆ ಎಂದಿದ್ದಾರೆ.
ಇದೇ ವೇಳೆ ಅಮೆರಿಕ ಮತ್ತು ಇರಾನ್ ನಡುವಿನ ಯುದ್ದದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದ ಅವರು, ಬ್ರಿಟನ್ ಜನತೆಯ ಹಿತದೃಷ್ಟಿಯಿಂದ ಕಾರ್ಯೋನ್ಮುಖವಾಗುವುದಾಗಿ ಹೇಳಿದ್ದಾರೆ.
ಜಲಸಂಧಿ ಕುರಿತಾಗಿ 35 ದೇಶಗಳ ಸಭೆಯನ್ನು ವಿದೇಶಾಂಗ ಕಾರ್ಯದರ್ಶಿ ವೆಟ್ಟೆ ಕೂಪರ್ ಮುನ್ನಡೆಸಲಿದ್ದಾರೆ. ನೌಕಾಮಾರ್ಗದ ಭದ್ರತೆ ಬಗ್ಗೆಯೂ ಚರ್ಚಿಸಲಾಗುವುದು ಎಂದಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…