ದೇಶ- ವಿದೇಶ

ಹೊರ್ಮುಜ್ ಜಲಸಂಧಿ ಮುಕ್ತಗೊಳಿಸಲು 35 ರಾಷ್ಟ್ರಗಳ ಜೊತೆ ಸಭೆ : ಬ್ರಿಟನ್

ಲಂಡನ್‌ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಆಯೋಜಿಸುವುದಕ್ಕೆ ಬ್ರಿಟನ್ ಮುಂದೆ ಬಂದಿದೆ.

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಈ ಕುರಿತು 35ಕ್ಕೂ ಹೆಚ್ಚು ರಾಷ್ಟ್ರಗಳ ಜೊತೆ ಸಭೆ ನಡೆಸುವುದಾಗಿ ಘೋಷಿಸಿದ್ದಾರೆ.

ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದಿಂದಾಗಿ ಹೊರ್ಮುಜ್ ಜಲಸಂಧಿಯು ಇರಾನ್ ಪಡೆಗಳಿಂದ ಮುಚ್ಚಲ್ಪಟ್ಟಿದೆ. ಪ್ರಪಂಚದ ಸುಮಾರು ಒಂದು ಐದನೇ ಒಂದು ಭಾಗದ ತೈಲ ಸಾಗಣೆಯು ಈ ಜಲಸಂಧಿಯ ಮೂಲಕ ನಡೆಯುತ್ತದೆ. ಇದರ ಮುಚ್ಚುವಿಕೆಯು ಜಾಗತಿಕ ತೈಲ ಬೆಲೆಗಳಲ್ಲಿ ಏರಿಕೆ ಮತ್ತು ಆರ್ಥಿಕ ಅಸ್ಥಿರತೆಗೆ ಕಾರಣವಾಗಿದೆ.

“ವಾಸ್ತವಿಕ ಮತ್ತು ಸಾಮೂಹಿಕ ಯೋಜನೆ” ರೂಪಿಸುವ ಉದ್ದೇಶದೊಂದಿಗೆ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಬ್ರಿಟನ್ ಆಯೋಜಿಸುವುದಕ್ಕೆ ಮುಂದಾಗಿದೆ. ಈ ಸಮ್ಮೇಳನವು ಲಂಡನ್‌ನಲ್ಲಿ ನಡೆಯಲಿದೆ.

ಈ ಕುರಿತು ಮಾತನಾಡಿರುವ ಬ್ರಿಟನ್‌ ಪ್ರಧಾನಿ ಕಿಯರ್‌ ಸ್ಟಾರ್ಮರ್‌, ಹೊರ್ಮುಜ್‌ ಜಲಸಂಧಿಯನ್ನು ಹೇಗೆ ತೆರೆಯಬೇಕಂಬ ಕುರಿತಂತೆ ಚರ್ಚಿಸಲು ಈ ವಾರ 35 ದೇಶಗಳ ಸಭೆ ಕರೆಯಲಾಗುವುದು. ಜತೆಗೆ ಸಾಗರದಲ್ಲಿ ಸಿಲುಕಿರುವ ಹಡಗುಗಳು ಮತ್ತು ನಾವಿಕರ ಸುರಕ್ಷತೆ ಹಾಗೂ ಜಲಸಂಧಿಯ ಸಂಚಾರ ಸ್ವಾತಂತ್ರ್ಯವನ್ನ ಮರುಸ್ಥಾಪಿಸಲು ಸಾಧ್ಯವಿರು ರಾಜತಾಂತ್ರಿಕ ಸಮಾಲೋಚನೆ ನಡೆಸಲಿದ್ದೇವೆ ಎಂದಿದ್ದಾರೆ.

ಇದೇ ವೇಳೆ ಅಮೆರಿಕ ಮತ್ತು ಇರಾನ್‌ ನಡುವಿನ ಯುದ್ದದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದ ಅವರು, ಬ್ರಿಟನ್ ಜನತೆಯ ಹಿತದೃಷ್ಟಿಯಿಂದ ಕಾರ್ಯೋನ್ಮುಖವಾಗುವುದಾಗಿ ಹೇಳಿದ್ದಾರೆ.

ಜಲಸಂಧಿ ಕುರಿತಾಗಿ 35 ದೇಶಗಳ ಸಭೆಯನ್ನು ವಿದೇಶಾಂಗ ಕಾರ್ಯದರ್ಶಿ ವೆಟ್ಟೆ ಕೂಪರ್‌ ಮುನ್ನಡೆಸಲಿದ್ದಾರೆ. ನೌಕಾಮಾರ್ಗದ ಭದ್ರತೆ ಬಗ್ಗೆಯೂ ಚರ್ಚಿಸಲಾಗುವುದು ಎಂದಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

9 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

9 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

10 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

12 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

12 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

12 hours ago