ದೇಶ- ವಿದೇಶ

ಹೊರ್ಮುಜ್ ಜಲಸಂಧಿ ಮುಕ್ತಗೊಳಿಸಲು 35 ರಾಷ್ಟ್ರಗಳ ಜೊತೆ ಸಭೆ : ಬ್ರಿಟನ್

ಲಂಡನ್‌ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಆಯೋಜಿಸುವುದಕ್ಕೆ ಬ್ರಿಟನ್ ಮುಂದೆ ಬಂದಿದೆ.

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಈ ಕುರಿತು 35ಕ್ಕೂ ಹೆಚ್ಚು ರಾಷ್ಟ್ರಗಳ ಜೊತೆ ಸಭೆ ನಡೆಸುವುದಾಗಿ ಘೋಷಿಸಿದ್ದಾರೆ.

ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದಿಂದಾಗಿ ಹೊರ್ಮುಜ್ ಜಲಸಂಧಿಯು ಇರಾನ್ ಪಡೆಗಳಿಂದ ಮುಚ್ಚಲ್ಪಟ್ಟಿದೆ. ಪ್ರಪಂಚದ ಸುಮಾರು ಒಂದು ಐದನೇ ಒಂದು ಭಾಗದ ತೈಲ ಸಾಗಣೆಯು ಈ ಜಲಸಂಧಿಯ ಮೂಲಕ ನಡೆಯುತ್ತದೆ. ಇದರ ಮುಚ್ಚುವಿಕೆಯು ಜಾಗತಿಕ ತೈಲ ಬೆಲೆಗಳಲ್ಲಿ ಏರಿಕೆ ಮತ್ತು ಆರ್ಥಿಕ ಅಸ್ಥಿರತೆಗೆ ಕಾರಣವಾಗಿದೆ.

“ವಾಸ್ತವಿಕ ಮತ್ತು ಸಾಮೂಹಿಕ ಯೋಜನೆ” ರೂಪಿಸುವ ಉದ್ದೇಶದೊಂದಿಗೆ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಬ್ರಿಟನ್ ಆಯೋಜಿಸುವುದಕ್ಕೆ ಮುಂದಾಗಿದೆ. ಈ ಸಮ್ಮೇಳನವು ಲಂಡನ್‌ನಲ್ಲಿ ನಡೆಯಲಿದೆ.

ಈ ಕುರಿತು ಮಾತನಾಡಿರುವ ಬ್ರಿಟನ್‌ ಪ್ರಧಾನಿ ಕಿಯರ್‌ ಸ್ಟಾರ್ಮರ್‌, ಹೊರ್ಮುಜ್‌ ಜಲಸಂಧಿಯನ್ನು ಹೇಗೆ ತೆರೆಯಬೇಕಂಬ ಕುರಿತಂತೆ ಚರ್ಚಿಸಲು ಈ ವಾರ 35 ದೇಶಗಳ ಸಭೆ ಕರೆಯಲಾಗುವುದು. ಜತೆಗೆ ಸಾಗರದಲ್ಲಿ ಸಿಲುಕಿರುವ ಹಡಗುಗಳು ಮತ್ತು ನಾವಿಕರ ಸುರಕ್ಷತೆ ಹಾಗೂ ಜಲಸಂಧಿಯ ಸಂಚಾರ ಸ್ವಾತಂತ್ರ್ಯವನ್ನ ಮರುಸ್ಥಾಪಿಸಲು ಸಾಧ್ಯವಿರು ರಾಜತಾಂತ್ರಿಕ ಸಮಾಲೋಚನೆ ನಡೆಸಲಿದ್ದೇವೆ ಎಂದಿದ್ದಾರೆ.

ಇದೇ ವೇಳೆ ಅಮೆರಿಕ ಮತ್ತು ಇರಾನ್‌ ನಡುವಿನ ಯುದ್ದದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದ ಅವರು, ಬ್ರಿಟನ್ ಜನತೆಯ ಹಿತದೃಷ್ಟಿಯಿಂದ ಕಾರ್ಯೋನ್ಮುಖವಾಗುವುದಾಗಿ ಹೇಳಿದ್ದಾರೆ.

ಜಲಸಂಧಿ ಕುರಿತಾಗಿ 35 ದೇಶಗಳ ಸಭೆಯನ್ನು ವಿದೇಶಾಂಗ ಕಾರ್ಯದರ್ಶಿ ವೆಟ್ಟೆ ಕೂಪರ್‌ ಮುನ್ನಡೆಸಲಿದ್ದಾರೆ. ನೌಕಾಮಾರ್ಗದ ಭದ್ರತೆ ಬಗ್ಗೆಯೂ ಚರ್ಚಿಸಲಾಗುವುದು ಎಂದಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

8 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

12 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

12 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

13 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

13 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

14 hours ago