ದೇಶ- ವಿದೇಶ

ಹೊರ್ಮುಜ್ ಜಲಸಂಧಿ ಮುಕ್ತಗೊಳಿಸಲು 35 ರಾಷ್ಟ್ರಗಳ ಜೊತೆ ಸಭೆ : ಬ್ರಿಟನ್

ಲಂಡನ್‌ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಆಯೋಜಿಸುವುದಕ್ಕೆ ಬ್ರಿಟನ್ ಮುಂದೆ ಬಂದಿದೆ.

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಈ ಕುರಿತು 35ಕ್ಕೂ ಹೆಚ್ಚು ರಾಷ್ಟ್ರಗಳ ಜೊತೆ ಸಭೆ ನಡೆಸುವುದಾಗಿ ಘೋಷಿಸಿದ್ದಾರೆ.

ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದಿಂದಾಗಿ ಹೊರ್ಮುಜ್ ಜಲಸಂಧಿಯು ಇರಾನ್ ಪಡೆಗಳಿಂದ ಮುಚ್ಚಲ್ಪಟ್ಟಿದೆ. ಪ್ರಪಂಚದ ಸುಮಾರು ಒಂದು ಐದನೇ ಒಂದು ಭಾಗದ ತೈಲ ಸಾಗಣೆಯು ಈ ಜಲಸಂಧಿಯ ಮೂಲಕ ನಡೆಯುತ್ತದೆ. ಇದರ ಮುಚ್ಚುವಿಕೆಯು ಜಾಗತಿಕ ತೈಲ ಬೆಲೆಗಳಲ್ಲಿ ಏರಿಕೆ ಮತ್ತು ಆರ್ಥಿಕ ಅಸ್ಥಿರತೆಗೆ ಕಾರಣವಾಗಿದೆ.

“ವಾಸ್ತವಿಕ ಮತ್ತು ಸಾಮೂಹಿಕ ಯೋಜನೆ” ರೂಪಿಸುವ ಉದ್ದೇಶದೊಂದಿಗೆ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಬ್ರಿಟನ್ ಆಯೋಜಿಸುವುದಕ್ಕೆ ಮುಂದಾಗಿದೆ. ಈ ಸಮ್ಮೇಳನವು ಲಂಡನ್‌ನಲ್ಲಿ ನಡೆಯಲಿದೆ.

ಈ ಕುರಿತು ಮಾತನಾಡಿರುವ ಬ್ರಿಟನ್‌ ಪ್ರಧಾನಿ ಕಿಯರ್‌ ಸ್ಟಾರ್ಮರ್‌, ಹೊರ್ಮುಜ್‌ ಜಲಸಂಧಿಯನ್ನು ಹೇಗೆ ತೆರೆಯಬೇಕಂಬ ಕುರಿತಂತೆ ಚರ್ಚಿಸಲು ಈ ವಾರ 35 ದೇಶಗಳ ಸಭೆ ಕರೆಯಲಾಗುವುದು. ಜತೆಗೆ ಸಾಗರದಲ್ಲಿ ಸಿಲುಕಿರುವ ಹಡಗುಗಳು ಮತ್ತು ನಾವಿಕರ ಸುರಕ್ಷತೆ ಹಾಗೂ ಜಲಸಂಧಿಯ ಸಂಚಾರ ಸ್ವಾತಂತ್ರ್ಯವನ್ನ ಮರುಸ್ಥಾಪಿಸಲು ಸಾಧ್ಯವಿರು ರಾಜತಾಂತ್ರಿಕ ಸಮಾಲೋಚನೆ ನಡೆಸಲಿದ್ದೇವೆ ಎಂದಿದ್ದಾರೆ.

ಇದೇ ವೇಳೆ ಅಮೆರಿಕ ಮತ್ತು ಇರಾನ್‌ ನಡುವಿನ ಯುದ್ದದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದ ಅವರು, ಬ್ರಿಟನ್ ಜನತೆಯ ಹಿತದೃಷ್ಟಿಯಿಂದ ಕಾರ್ಯೋನ್ಮುಖವಾಗುವುದಾಗಿ ಹೇಳಿದ್ದಾರೆ.

ಜಲಸಂಧಿ ಕುರಿತಾಗಿ 35 ದೇಶಗಳ ಸಭೆಯನ್ನು ವಿದೇಶಾಂಗ ಕಾರ್ಯದರ್ಶಿ ವೆಟ್ಟೆ ಕೂಪರ್‌ ಮುನ್ನಡೆಸಲಿದ್ದಾರೆ. ನೌಕಾಮಾರ್ಗದ ಭದ್ರತೆ ಬಗ್ಗೆಯೂ ಚರ್ಚಿಸಲಾಗುವುದು ಎಂದಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

2 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

3 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

3 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

3 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

4 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

4 hours ago