ದೇಶ- ವಿದೇಶ

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.‌

ಶ್ವೇತಭವನದಲ್ಲಿ ಚಾರ್ಲ್ಸ್ ಅವರೊಂದಿಗೆ ಔತಣಕೂಟದಲ್ಲಿ ಭಾಗವಹಿಸಿ ಮಾತನಾಡಿದ ಟ್ರಂಪ್, ನಾವು ಪಶ್ಚಿಮ ಏಷ್ಯಾದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ನಾವು ನಿರ್ದಿಷ್ಟ ಎದುರಾಳಿಯನ್ನು ಸೋಲಿಸಿದ್ದೇವೆ. ಆ ವೈರಿಯನ್ನು ಎಂದಿಗೂ ಬಿಡುವುದಿಲ್ಲ. ನನಗಿಂತಲೂ ಹೆಚ್ಚಾಗಿ ಚಾರ್ಲ್ಸ್ ಅವರೇ ಅದನ್ನು ಒಪ್ಪುತ್ತಾರೆ. ಇರಾನ್ ಅಣ್ವಸ್ತ್ರ ಹೊಂದಲು ಎಂದಿಗೂ ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಭಾಷಣ ನಡೆಸಿದ್ದ ಚಾರ್ಲ್ಸ್, ಇರಾನ್ ಯುದ್ಧವನ್ನು ನೇರವಾಗಿ ಉಲ್ಲೇಖ ಮಾಡಲಿಲ್ಲ. ಆದರೆ ಟ್ರಂಪ್ ಅವರ ನ್ಯಾಟೊ ಟೀಕೆ ಕುರಿತು ಪ್ರತಿಪಾದಿಸಿದರು. ಅಲ್ಲದೆ ರಷ್ಯಾ ವಿರುದ್ಧದ ಯುದ್ಧದಲ್ಲಿ ಉಕ್ರೇನ್‌ಗೆ ಅಮೆರಿಕ ನೀಡುವ ಸಹಾಯದ ಪ್ರಾಮುಖ್ಯತೆ ಕುರಿತು ಒತ್ತಿ ಹೇಳಿದರು. ಇರಾನ್ ಯುದ್ಧ ಸೇರಿದಂತೆ ಹಲವು ವಿಚಾರಗಳಲ್ಲಿ ಅಮೆರಿಕ ಮತ್ತು ಬ್ರಿಟನ್‌ ಸರ್ಕಾರದ ನಡುವೆ ಇತ್ತೀಚೆಗೆ ಭಿನ್ನಾಭಿಪ್ರಾಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಾರ್ಲ್ಸ್‌ ಭೇಟಿ ಮಹತ್ವ ಪಡೆದುಕೊಂಡಿದೆ. ಇರಾನ್ ಯುದ್ಧದ ಸಂದರ್ಭದಲ್ಲಿ ನ್ಯಾಟೊದಿಂದ ಬೆಂಬಲ ಸಿಗದಿರುವುದು ಟ್ರಂಪ್ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಬ್ರಿಟನ್ ಪ್ರಧಾನಿ ಕೀರ್‌ ಸ್ಟಾರ್ಮರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ನಾಲ್ಕು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಮೆರಿಕದ 250ನೇ ವರ್ಷಾಚರಣೆಯಲ್ಲಿ ಭಾಗಿಯಾಗುವ ಹಾಗೂ ಉಭಯ ದೇಶಗಳ ನಡುವಿನ ಸಂಬಂಧವನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago