ದೇಶ- ವಿದೇಶ

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.‌

ಶ್ವೇತಭವನದಲ್ಲಿ ಚಾರ್ಲ್ಸ್ ಅವರೊಂದಿಗೆ ಔತಣಕೂಟದಲ್ಲಿ ಭಾಗವಹಿಸಿ ಮಾತನಾಡಿದ ಟ್ರಂಪ್, ನಾವು ಪಶ್ಚಿಮ ಏಷ್ಯಾದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ನಾವು ನಿರ್ದಿಷ್ಟ ಎದುರಾಳಿಯನ್ನು ಸೋಲಿಸಿದ್ದೇವೆ. ಆ ವೈರಿಯನ್ನು ಎಂದಿಗೂ ಬಿಡುವುದಿಲ್ಲ. ನನಗಿಂತಲೂ ಹೆಚ್ಚಾಗಿ ಚಾರ್ಲ್ಸ್ ಅವರೇ ಅದನ್ನು ಒಪ್ಪುತ್ತಾರೆ. ಇರಾನ್ ಅಣ್ವಸ್ತ್ರ ಹೊಂದಲು ಎಂದಿಗೂ ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಭಾಷಣ ನಡೆಸಿದ್ದ ಚಾರ್ಲ್ಸ್, ಇರಾನ್ ಯುದ್ಧವನ್ನು ನೇರವಾಗಿ ಉಲ್ಲೇಖ ಮಾಡಲಿಲ್ಲ. ಆದರೆ ಟ್ರಂಪ್ ಅವರ ನ್ಯಾಟೊ ಟೀಕೆ ಕುರಿತು ಪ್ರತಿಪಾದಿಸಿದರು. ಅಲ್ಲದೆ ರಷ್ಯಾ ವಿರುದ್ಧದ ಯುದ್ಧದಲ್ಲಿ ಉಕ್ರೇನ್‌ಗೆ ಅಮೆರಿಕ ನೀಡುವ ಸಹಾಯದ ಪ್ರಾಮುಖ್ಯತೆ ಕುರಿತು ಒತ್ತಿ ಹೇಳಿದರು. ಇರಾನ್ ಯುದ್ಧ ಸೇರಿದಂತೆ ಹಲವು ವಿಚಾರಗಳಲ್ಲಿ ಅಮೆರಿಕ ಮತ್ತು ಬ್ರಿಟನ್‌ ಸರ್ಕಾರದ ನಡುವೆ ಇತ್ತೀಚೆಗೆ ಭಿನ್ನಾಭಿಪ್ರಾಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಾರ್ಲ್ಸ್‌ ಭೇಟಿ ಮಹತ್ವ ಪಡೆದುಕೊಂಡಿದೆ. ಇರಾನ್ ಯುದ್ಧದ ಸಂದರ್ಭದಲ್ಲಿ ನ್ಯಾಟೊದಿಂದ ಬೆಂಬಲ ಸಿಗದಿರುವುದು ಟ್ರಂಪ್ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಬ್ರಿಟನ್ ಪ್ರಧಾನಿ ಕೀರ್‌ ಸ್ಟಾರ್ಮರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ನಾಲ್ಕು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಮೆರಿಕದ 250ನೇ ವರ್ಷಾಚರಣೆಯಲ್ಲಿ ಭಾಗಿಯಾಗುವ ಹಾಗೂ ಉಭಯ ದೇಶಗಳ ನಡುವಿನ ಸಂಬಂಧವನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

1 hour ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

4 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

5 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

8 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

8 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

11 hours ago