ನವದೆಹಲಿ: ಬ್ರಿಟನ್ ನೂತನ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಪ್ರಧಾನಿ ಮೋದಿ ಇಂದು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳ ನಾಯಕರು ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದವನ್ನು ಆದಷ್ಟು ಬೇಗ ಮುಗಿಸುವ ಕಾರ್ಯದತ್ತ ಪರಸ್ಪರ ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಬ್ರಿಟನ್ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ಅವರ ಲೇಬರ್ ಪಾರ್ಟಿಯು ಜಯಭೇರಿ ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಉಭಯ ನಾಯಕರು ಭಾರತ ಮತ್ತು ಯುಕೆ ನಡುವಿನ ಐತಿಹಾಸಿಕ ಸಂಬಂಧಗಳನ್ನು ನೆನಪಿಸಿಕೊಂಡಿದ್ದಾರೆ. ಎರಡೂ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಯುಕೆಯ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಮುಂದುವರಿಸಲು ಒಪ್ಪಿಕೊಂಡಿದ್ದಾರೆ. ಉಭಯ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದ್ದರಿಂದ ಭಾರತಕ್ಕೆ ಆರಂಭಿಕ ಭೇಟಿಗಾಗಿ ಸ್ಟಾರ್ಮರ್ಗೆ ಮೋದಿ ಆಹ್ವಾನವನ್ನೂ ನೀಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸ್ಟಾರ್ಮರ್ ಅವರೊಂದಿಗೆ ಮಾತನಾಡಿದ್ದು ಸಂತೋಷವಾಗಿದೆ. ಯುಕೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಕ್ಕೆ ಅವರನ್ನು ಅಭಿನಂದಿಸಿದ್ದೇನೆ. ನಮ್ಮ ಜನರ ಪ್ರಗತಿ ಸಮೃದ್ಧಿ ಮತ್ತು ಜಾಗತಿಕ ಒಳಿತಿಗಾಗಿ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಮತ್ತು ದೃಢವಾದ ಭಾರತ-ಯುಕೆ ಆರ್ಥಿಕ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…