ನವದೆಹಲಿ: ಬ್ರಿಟನ್ ನೂತನ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಪ್ರಧಾನಿ ಮೋದಿ ಇಂದು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳ ನಾಯಕರು ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದವನ್ನು ಆದಷ್ಟು ಬೇಗ ಮುಗಿಸುವ ಕಾರ್ಯದತ್ತ ಪರಸ್ಪರ ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಬ್ರಿಟನ್ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ಅವರ ಲೇಬರ್ ಪಾರ್ಟಿಯು ಜಯಭೇರಿ ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಉಭಯ ನಾಯಕರು ಭಾರತ ಮತ್ತು ಯುಕೆ ನಡುವಿನ ಐತಿಹಾಸಿಕ ಸಂಬಂಧಗಳನ್ನು ನೆನಪಿಸಿಕೊಂಡಿದ್ದಾರೆ. ಎರಡೂ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಯುಕೆಯ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಮುಂದುವರಿಸಲು ಒಪ್ಪಿಕೊಂಡಿದ್ದಾರೆ. ಉಭಯ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದ್ದರಿಂದ ಭಾರತಕ್ಕೆ ಆರಂಭಿಕ ಭೇಟಿಗಾಗಿ ಸ್ಟಾರ್ಮರ್ಗೆ ಮೋದಿ ಆಹ್ವಾನವನ್ನೂ ನೀಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸ್ಟಾರ್ಮರ್ ಅವರೊಂದಿಗೆ ಮಾತನಾಡಿದ್ದು ಸಂತೋಷವಾಗಿದೆ. ಯುಕೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಕ್ಕೆ ಅವರನ್ನು ಅಭಿನಂದಿಸಿದ್ದೇನೆ. ನಮ್ಮ ಜನರ ಪ್ರಗತಿ ಸಮೃದ್ಧಿ ಮತ್ತು ಜಾಗತಿಕ ಒಳಿತಿಗಾಗಿ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಮತ್ತು ದೃಢವಾದ ಭಾರತ-ಯುಕೆ ಆರ್ಥಿಕ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…