ದೇಶ- ವಿದೇಶ

ಬ್ರಿಟನ್‌ನ ನೂತನ ಪ್ರಧಾನಿಗೆ ಮೋದಿ ಕರೆ: ಭಾರತಕ್ಕೆ ಆಹ್ವಾನ

ನವದೆಹಲಿ: ಬ್ರಿಟನ್‌ ನೂತನ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರೊಂದಿಗೆ ಪ್ರಧಾನಿ ಮೋದಿ ಇಂದು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳ ನಾಯಕರು ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದವನ್ನು ಆದಷ್ಟು ಬೇಗ ಮುಗಿಸುವ ಕಾರ್ಯದತ್ತ ಪರಸ್ಪರ ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬ್ರಿಟನ್‌ ಚುನಾವಣೆಯಲ್ಲಿ ಕೀರ್‌ ಸ್ಟಾರ್ಮರ್‌ ಅವರ ಲೇಬರ್‌ ಪಾರ್ಟಿಯು ಜಯಭೇರಿ ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಉಭಯ ನಾಯಕರು ಭಾರತ ಮತ್ತು ಯುಕೆ ನಡುವಿನ ಐತಿಹಾಸಿಕ ಸಂಬಂಧಗಳನ್ನು ನೆನಪಿಸಿಕೊಂಡಿದ್ದಾರೆ. ಎರಡೂ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಯುಕೆಯ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಮುಂದುವರಿಸಲು ಒಪ್ಪಿಕೊಂಡಿದ್ದಾರೆ. ಉಭಯ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದ್ದರಿಂದ ಭಾರತಕ್ಕೆ ಆರಂಭಿಕ ಭೇಟಿಗಾಗಿ ಸ್ಟಾರ್ಮರ್‌ಗೆ ಮೋದಿ ಆಹ್ವಾನವನ್ನೂ ನೀಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸ್ಟಾರ್ಮರ್‌ ಅವರೊಂದಿಗೆ ಮಾತನಾಡಿದ್ದು ಸಂತೋಷವಾಗಿದೆ. ಯುಕೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಕ್ಕೆ ಅವರನ್ನು ಅಭಿನಂದಿಸಿದ್ದೇನೆ. ನಮ್ಮ ಜನರ ಪ್ರಗತಿ ಸಮೃದ್ಧಿ ಮತ್ತು ಜಾಗತಿಕ ಒಳಿತಿಗಾಗಿ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಮತ್ತು ದೃಢವಾದ ಭಾರತ-ಯುಕೆ ಆರ್ಥಿಕ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

17 mins ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

2 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

2 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

2 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

2 hours ago