ನವದೆಹಲಿ: ಬ್ರಿಟನ್ ನೂತನ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಪ್ರಧಾನಿ ಮೋದಿ ಇಂದು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳ ನಾಯಕರು ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದವನ್ನು ಆದಷ್ಟು ಬೇಗ ಮುಗಿಸುವ ಕಾರ್ಯದತ್ತ ಪರಸ್ಪರ ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಬ್ರಿಟನ್ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ಅವರ ಲೇಬರ್ ಪಾರ್ಟಿಯು ಜಯಭೇರಿ ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಉಭಯ ನಾಯಕರು ಭಾರತ ಮತ್ತು ಯುಕೆ ನಡುವಿನ ಐತಿಹಾಸಿಕ ಸಂಬಂಧಗಳನ್ನು ನೆನಪಿಸಿಕೊಂಡಿದ್ದಾರೆ. ಎರಡೂ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಯುಕೆಯ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಮುಂದುವರಿಸಲು ಒಪ್ಪಿಕೊಂಡಿದ್ದಾರೆ. ಉಭಯ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದ್ದರಿಂದ ಭಾರತಕ್ಕೆ ಆರಂಭಿಕ ಭೇಟಿಗಾಗಿ ಸ್ಟಾರ್ಮರ್ಗೆ ಮೋದಿ ಆಹ್ವಾನವನ್ನೂ ನೀಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸ್ಟಾರ್ಮರ್ ಅವರೊಂದಿಗೆ ಮಾತನಾಡಿದ್ದು ಸಂತೋಷವಾಗಿದೆ. ಯುಕೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಕ್ಕೆ ಅವರನ್ನು ಅಭಿನಂದಿಸಿದ್ದೇನೆ. ನಮ್ಮ ಜನರ ಪ್ರಗತಿ ಸಮೃದ್ಧಿ ಮತ್ತು ಜಾಗತಿಕ ಒಳಿತಿಗಾಗಿ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಮತ್ತು ದೃಢವಾದ ಭಾರತ-ಯುಕೆ ಆರ್ಥಿಕ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…