ದೇಶ- ವಿದೇಶ

ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಹಾಕದ ರಿಷಿ ಸುನಾಕ್‌ಗೆ ದಂಡ

ಲಂಡನ್: ಸಾಮಾಜಿಕ ಮಾಧ್ಯಮದ ವೀಡಿಯೋವನ್ನು ಚಿತ್ರೀಕರಿಸುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಧರಿಸದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್‌ಗೆ ದಂಡ ವಿಧಿಸಲಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿಮಸೀಟ್ ಬೆಲ್ಟ್ ಧರಿಸದಿದ್ದಕ್ಕೆ ರಿಷಿ ಸುನಾಕ್ ಅವರಿಗೆ 100 ಪೌಂಡ್ (ಸುಮಾರು 10 ಸಾವಿರ ರೂ.) ದಂಡವನ್ನು ವಿಧಿಸಲಾಗಿದೆ ಎಂದು ಲಂಕಾಶೈರ್  ಪೊಲೀಸರು ತಿಳಿಸಿದ್ದಾರೆ.

ಲಂಕಾಶೈರ್‌ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಸೀಟ್‌ಬೆಲ್ಟ್ ಧರಿಸದೇ ಇರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಬಳಿಕ ನಾವು ಶುಕ್ರವಾರ ಲಂಡನ್‌ನ 42 ವರ್ಷದ ವ್ಯಕ್ತಿಗೆ ಷರತ್ತುಬದ್ಧವಾಗಿ ದಂಡ ವಿಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಓದಿಕೊಳ್ಳುವ ಟೈಂನಲ್ಲಿ ವಾರ್ಡನ್‍ನಿಂದ ಲೈಟ್ಸ್ ಆಫ್ – ಮೊಬೈಲ್ ಟಾರ್ಚ್‍ನಲ್ಲೇ ವಿದ್ಯಾರ್ಥಿನಿಯರಿಂದ ವಿದ್ಯಾಭ್ಯಾಸ

ಗುರುವಾರ ಸುನಾಕ್ ಇಂಗ್ಲೆಂಡ್‌ನ ವಾಯುವ್ಯ ಭಾಗದಲ್ಲಿ ಪ್ರಯಾಣ ಮಾಡುತ್ತಿದ್ದಾಗ ವೀಡಿಯೋವೊಂದನ್ನು ಚಿತ್ರೀಕರಿಸಲು ಸೀಟ್‌ಬೆಲ್ಟ್ ಅನ್ನು ತೆಗೆದಿದ್ದಾರೆ. ತಮ್ಮ ತಪ್ಪಿಗೆ ಅವರು ಬಳಿಕ ಕ್ಷಮೆಯನ್ನೂ ಯಾಚಿಸಿದ್ದಾರೆ. ಅವರು ಎಲ್ಲರಿಗೂ ಸೀಟ್‌ಬೆಲ್ಟ್ ಹಾಕಬೇಕು ಎಂಬುದನ್ನೇ ಹೇಳುತ್ತಾರೆ ಎಂದು ಸುನಾಕ್ ಅವರ ವಕ್ತಾರರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಸುನಾಕ್ ದೇಶದಾದ್ಯಂತ 100 ಕ್ಕೂ ಹೆಚ್ಚು ಯೋಜನೆಗಳಿಗೆ ಹಣ ನೀಡಲು ತನ್ನ ಸರ್ಕಾರದ ಹೊಸ ಲೆವೆಲಿಂಗ್ ಅಪ್ ಫಂಡ್ ಪ್ರಕಟಣೆಗಳನ್ನು ಪ್ರಚಾರ ಮಾಡಲು ಚಲಿಸುವ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತು ವೀಡಿಯೋವನ್ನು ಚಿತ್ರೀಕರಿಸಿದ್ದಾರೆ. ಅವರು ಕ್ಯಾಮೆರಾವನ್ನು ನೋಡುತ್ತಾ ಮಾತನಾಡುತ್ತಿದ್ದರೆ, ಕಾರಿನ ಹಿಂದುಗಡೆಯಿಂದ ಪೋಲೀಸ್ ಬೈಕ್‌ಗಳು ಅವರ ಕಾರಿಗೆ ಬೆಂಗಾವಲು ಮಾಡುವುದು ಕಾಣಿಸಿಕೊಂಡಿದೆ.

andolanait

Recent Posts

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

3 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

24 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

2 hours ago