ದೇಶ- ವಿದೇಶ

ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಹಾಕದ ರಿಷಿ ಸುನಾಕ್‌ಗೆ ದಂಡ

ಲಂಡನ್: ಸಾಮಾಜಿಕ ಮಾಧ್ಯಮದ ವೀಡಿಯೋವನ್ನು ಚಿತ್ರೀಕರಿಸುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಧರಿಸದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್‌ಗೆ ದಂಡ ವಿಧಿಸಲಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿಮಸೀಟ್ ಬೆಲ್ಟ್ ಧರಿಸದಿದ್ದಕ್ಕೆ ರಿಷಿ ಸುನಾಕ್ ಅವರಿಗೆ 100 ಪೌಂಡ್ (ಸುಮಾರು 10 ಸಾವಿರ ರೂ.) ದಂಡವನ್ನು ವಿಧಿಸಲಾಗಿದೆ ಎಂದು ಲಂಕಾಶೈರ್  ಪೊಲೀಸರು ತಿಳಿಸಿದ್ದಾರೆ.

ಲಂಕಾಶೈರ್‌ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಸೀಟ್‌ಬೆಲ್ಟ್ ಧರಿಸದೇ ಇರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಬಳಿಕ ನಾವು ಶುಕ್ರವಾರ ಲಂಡನ್‌ನ 42 ವರ್ಷದ ವ್ಯಕ್ತಿಗೆ ಷರತ್ತುಬದ್ಧವಾಗಿ ದಂಡ ವಿಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಓದಿಕೊಳ್ಳುವ ಟೈಂನಲ್ಲಿ ವಾರ್ಡನ್‍ನಿಂದ ಲೈಟ್ಸ್ ಆಫ್ – ಮೊಬೈಲ್ ಟಾರ್ಚ್‍ನಲ್ಲೇ ವಿದ್ಯಾರ್ಥಿನಿಯರಿಂದ ವಿದ್ಯಾಭ್ಯಾಸ

ಗುರುವಾರ ಸುನಾಕ್ ಇಂಗ್ಲೆಂಡ್‌ನ ವಾಯುವ್ಯ ಭಾಗದಲ್ಲಿ ಪ್ರಯಾಣ ಮಾಡುತ್ತಿದ್ದಾಗ ವೀಡಿಯೋವೊಂದನ್ನು ಚಿತ್ರೀಕರಿಸಲು ಸೀಟ್‌ಬೆಲ್ಟ್ ಅನ್ನು ತೆಗೆದಿದ್ದಾರೆ. ತಮ್ಮ ತಪ್ಪಿಗೆ ಅವರು ಬಳಿಕ ಕ್ಷಮೆಯನ್ನೂ ಯಾಚಿಸಿದ್ದಾರೆ. ಅವರು ಎಲ್ಲರಿಗೂ ಸೀಟ್‌ಬೆಲ್ಟ್ ಹಾಕಬೇಕು ಎಂಬುದನ್ನೇ ಹೇಳುತ್ತಾರೆ ಎಂದು ಸುನಾಕ್ ಅವರ ವಕ್ತಾರರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಸುನಾಕ್ ದೇಶದಾದ್ಯಂತ 100 ಕ್ಕೂ ಹೆಚ್ಚು ಯೋಜನೆಗಳಿಗೆ ಹಣ ನೀಡಲು ತನ್ನ ಸರ್ಕಾರದ ಹೊಸ ಲೆವೆಲಿಂಗ್ ಅಪ್ ಫಂಡ್ ಪ್ರಕಟಣೆಗಳನ್ನು ಪ್ರಚಾರ ಮಾಡಲು ಚಲಿಸುವ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತು ವೀಡಿಯೋವನ್ನು ಚಿತ್ರೀಕರಿಸಿದ್ದಾರೆ. ಅವರು ಕ್ಯಾಮೆರಾವನ್ನು ನೋಡುತ್ತಾ ಮಾತನಾಡುತ್ತಿದ್ದರೆ, ಕಾರಿನ ಹಿಂದುಗಡೆಯಿಂದ ಪೋಲೀಸ್ ಬೈಕ್‌ಗಳು ಅವರ ಕಾರಿಗೆ ಬೆಂಗಾವಲು ಮಾಡುವುದು ಕಾಣಿಸಿಕೊಂಡಿದೆ.

andolanait

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

16 mins ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

24 mins ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

28 mins ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

1 hour ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

1 hour ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

1 hour ago