ದೇಶ- ವಿದೇಶ

ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಹಾಕದ ರಿಷಿ ಸುನಾಕ್‌ಗೆ ದಂಡ

ಲಂಡನ್: ಸಾಮಾಜಿಕ ಮಾಧ್ಯಮದ ವೀಡಿಯೋವನ್ನು ಚಿತ್ರೀಕರಿಸುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಧರಿಸದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್‌ಗೆ ದಂಡ ವಿಧಿಸಲಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿಮಸೀಟ್ ಬೆಲ್ಟ್ ಧರಿಸದಿದ್ದಕ್ಕೆ ರಿಷಿ ಸುನಾಕ್ ಅವರಿಗೆ 100 ಪೌಂಡ್ (ಸುಮಾರು 10 ಸಾವಿರ ರೂ.) ದಂಡವನ್ನು ವಿಧಿಸಲಾಗಿದೆ ಎಂದು ಲಂಕಾಶೈರ್  ಪೊಲೀಸರು ತಿಳಿಸಿದ್ದಾರೆ.

ಲಂಕಾಶೈರ್‌ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಸೀಟ್‌ಬೆಲ್ಟ್ ಧರಿಸದೇ ಇರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಬಳಿಕ ನಾವು ಶುಕ್ರವಾರ ಲಂಡನ್‌ನ 42 ವರ್ಷದ ವ್ಯಕ್ತಿಗೆ ಷರತ್ತುಬದ್ಧವಾಗಿ ದಂಡ ವಿಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಓದಿಕೊಳ್ಳುವ ಟೈಂನಲ್ಲಿ ವಾರ್ಡನ್‍ನಿಂದ ಲೈಟ್ಸ್ ಆಫ್ – ಮೊಬೈಲ್ ಟಾರ್ಚ್‍ನಲ್ಲೇ ವಿದ್ಯಾರ್ಥಿನಿಯರಿಂದ ವಿದ್ಯಾಭ್ಯಾಸ

ಗುರುವಾರ ಸುನಾಕ್ ಇಂಗ್ಲೆಂಡ್‌ನ ವಾಯುವ್ಯ ಭಾಗದಲ್ಲಿ ಪ್ರಯಾಣ ಮಾಡುತ್ತಿದ್ದಾಗ ವೀಡಿಯೋವೊಂದನ್ನು ಚಿತ್ರೀಕರಿಸಲು ಸೀಟ್‌ಬೆಲ್ಟ್ ಅನ್ನು ತೆಗೆದಿದ್ದಾರೆ. ತಮ್ಮ ತಪ್ಪಿಗೆ ಅವರು ಬಳಿಕ ಕ್ಷಮೆಯನ್ನೂ ಯಾಚಿಸಿದ್ದಾರೆ. ಅವರು ಎಲ್ಲರಿಗೂ ಸೀಟ್‌ಬೆಲ್ಟ್ ಹಾಕಬೇಕು ಎಂಬುದನ್ನೇ ಹೇಳುತ್ತಾರೆ ಎಂದು ಸುನಾಕ್ ಅವರ ವಕ್ತಾರರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಸುನಾಕ್ ದೇಶದಾದ್ಯಂತ 100 ಕ್ಕೂ ಹೆಚ್ಚು ಯೋಜನೆಗಳಿಗೆ ಹಣ ನೀಡಲು ತನ್ನ ಸರ್ಕಾರದ ಹೊಸ ಲೆವೆಲಿಂಗ್ ಅಪ್ ಫಂಡ್ ಪ್ರಕಟಣೆಗಳನ್ನು ಪ್ರಚಾರ ಮಾಡಲು ಚಲಿಸುವ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತು ವೀಡಿಯೋವನ್ನು ಚಿತ್ರೀಕರಿಸಿದ್ದಾರೆ. ಅವರು ಕ್ಯಾಮೆರಾವನ್ನು ನೋಡುತ್ತಾ ಮಾತನಾಡುತ್ತಿದ್ದರೆ, ಕಾರಿನ ಹಿಂದುಗಡೆಯಿಂದ ಪೋಲೀಸ್ ಬೈಕ್‌ಗಳು ಅವರ ಕಾರಿಗೆ ಬೆಂಗಾವಲು ಮಾಡುವುದು ಕಾಣಿಸಿಕೊಂಡಿದೆ.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

7 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

7 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

8 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

8 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

8 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

9 hours ago