ದೇಶ- ವಿದೇಶ

ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಹಾಕದ ರಿಷಿ ಸುನಾಕ್‌ಗೆ ದಂಡ

ಲಂಡನ್: ಸಾಮಾಜಿಕ ಮಾಧ್ಯಮದ ವೀಡಿಯೋವನ್ನು ಚಿತ್ರೀಕರಿಸುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಧರಿಸದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್‌ಗೆ ದಂಡ ವಿಧಿಸಲಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿಮಸೀಟ್ ಬೆಲ್ಟ್ ಧರಿಸದಿದ್ದಕ್ಕೆ ರಿಷಿ ಸುನಾಕ್ ಅವರಿಗೆ 100 ಪೌಂಡ್ (ಸುಮಾರು 10 ಸಾವಿರ ರೂ.) ದಂಡವನ್ನು ವಿಧಿಸಲಾಗಿದೆ ಎಂದು ಲಂಕಾಶೈರ್  ಪೊಲೀಸರು ತಿಳಿಸಿದ್ದಾರೆ.

ಲಂಕಾಶೈರ್‌ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಸೀಟ್‌ಬೆಲ್ಟ್ ಧರಿಸದೇ ಇರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಬಳಿಕ ನಾವು ಶುಕ್ರವಾರ ಲಂಡನ್‌ನ 42 ವರ್ಷದ ವ್ಯಕ್ತಿಗೆ ಷರತ್ತುಬದ್ಧವಾಗಿ ದಂಡ ವಿಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಓದಿಕೊಳ್ಳುವ ಟೈಂನಲ್ಲಿ ವಾರ್ಡನ್‍ನಿಂದ ಲೈಟ್ಸ್ ಆಫ್ – ಮೊಬೈಲ್ ಟಾರ್ಚ್‍ನಲ್ಲೇ ವಿದ್ಯಾರ್ಥಿನಿಯರಿಂದ ವಿದ್ಯಾಭ್ಯಾಸ

ಗುರುವಾರ ಸುನಾಕ್ ಇಂಗ್ಲೆಂಡ್‌ನ ವಾಯುವ್ಯ ಭಾಗದಲ್ಲಿ ಪ್ರಯಾಣ ಮಾಡುತ್ತಿದ್ದಾಗ ವೀಡಿಯೋವೊಂದನ್ನು ಚಿತ್ರೀಕರಿಸಲು ಸೀಟ್‌ಬೆಲ್ಟ್ ಅನ್ನು ತೆಗೆದಿದ್ದಾರೆ. ತಮ್ಮ ತಪ್ಪಿಗೆ ಅವರು ಬಳಿಕ ಕ್ಷಮೆಯನ್ನೂ ಯಾಚಿಸಿದ್ದಾರೆ. ಅವರು ಎಲ್ಲರಿಗೂ ಸೀಟ್‌ಬೆಲ್ಟ್ ಹಾಕಬೇಕು ಎಂಬುದನ್ನೇ ಹೇಳುತ್ತಾರೆ ಎಂದು ಸುನಾಕ್ ಅವರ ವಕ್ತಾರರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಸುನಾಕ್ ದೇಶದಾದ್ಯಂತ 100 ಕ್ಕೂ ಹೆಚ್ಚು ಯೋಜನೆಗಳಿಗೆ ಹಣ ನೀಡಲು ತನ್ನ ಸರ್ಕಾರದ ಹೊಸ ಲೆವೆಲಿಂಗ್ ಅಪ್ ಫಂಡ್ ಪ್ರಕಟಣೆಗಳನ್ನು ಪ್ರಚಾರ ಮಾಡಲು ಚಲಿಸುವ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತು ವೀಡಿಯೋವನ್ನು ಚಿತ್ರೀಕರಿಸಿದ್ದಾರೆ. ಅವರು ಕ್ಯಾಮೆರಾವನ್ನು ನೋಡುತ್ತಾ ಮಾತನಾಡುತ್ತಿದ್ದರೆ, ಕಾರಿನ ಹಿಂದುಗಡೆಯಿಂದ ಪೋಲೀಸ್ ಬೈಕ್‌ಗಳು ಅವರ ಕಾರಿಗೆ ಬೆಂಗಾವಲು ಮಾಡುವುದು ಕಾಣಿಸಿಕೊಂಡಿದೆ.

andolanait

Recent Posts

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

17 mins ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

2 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

2 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

3 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago