ಪಾಕ್‌ ದಾಳಿಗೆ ಪ್ರತ್ಯುತ್ತರ : ಉಗ್ರರ ಲಾಂಚ್‌ಪ್ಯಾಡ್‌ ಧ್ವಂಸಗೊಳಿಸಿದ ಬಿಎಸ್‌ಎಫ್‌

ಹೊಸದಿಲ್ಲಿ : ಅಂತರರಾಷ್ಟ್ರೀಯ ಗಡಿ ಹಾಗೂ ಎಲ್‌ಒಸಿ ಬಳಿ ಅಪ್ರಚೋದಿತ ಗುಂಡಿನ ದಾಳಿಯನ್ನು ಮುಂದುವರೆಸಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಉಗ್ರರ ಲಾಂಚ್‌ಪ್ಯಾಡ್‌ನ್ನು ಸಂಪೂರ್ಣವಾಗಿ ನಾಶಪಡಿಸಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ತಿಳಿಸಿದೆ.

ಈ ಕುರಿತು ಶನಿವಾರ ಮಾಹಿತಿ ನೀಡಿರುವ ಬಿಎಸ್‌ಎಫ್‌ ವಕ್ತಾರರು, ಪಾಕಿಸ್ತಾನದ ಸಿಯಾಲ್‌ಕೋಟ್‌ ಜಿಲ್ಲೆಯ ಲೂನಿಯಲ್ಲಿ ಉಗ್ರರ ನೆಲೆಯಿತ್ತು. ಜಮ್ಮು ವಲಯದಲ್ಲಿ ಶುಕ್ರವಾರ ರಾತ್ರಿ ಪಾಕಿಸ್ತಾನ ಬಿಎಸ್‌ಎಫ್‌ ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ನಾವು ತಕ್ಕ ಉತ್ತರ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:- ಭಾರತ-ಪಾಕಿಸ್ತಾನ ಸಂಘರ್ಷ | ಪಾಕ್‌ ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ 

ದಾಳಿಯಿಂದ ಗಡಿಯಲ್ಲಿನ ಪಾಕಿಸ್ತಾನ ರೇಂಜರ್‌ಗಳಿಗೆ ಶಿಬಿರಗಳಿಗೆ ಹೆಚ್ಚು ಹಾನಿಯಾಗಿದೆ. ಕಾಶ್ಮೀರದಿಂದ ಗುಜರಾತ್‌ವೆಗಿನ ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಶುಕ್ರವಾರ ರಾತ್ರಿ ಡ್ರೋನ್‌ ದಾಳಿ ನಡೆಸಿದೆ. ಅವರ ಎಲ್ಲಾ ಪ್ರಯತ್ನವನ್ನು ವಿಫಲಗೊಳಿಸುವಲ್ಲಿ ನಾವು ಸಫಲರಾಗಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

38 mins ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

3 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

8 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

8 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

8 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

8 hours ago