ದೇಶ- ವಿದೇಶ

ರಾಜ್ಯಗಳ ಪಾಲಿಗೆ ನಿರಾಶೆಯ ಬಜೆಟ್‌: ಡಿಸಿಎಂ ಡಿಕೆ ಶಿವಕುಮಾರ್‌

ನವದೆಹಲಿ: ಕೇಂದ್ರ ಸರ್ಕಾರಕ್ಕೆ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಕೇಂದ್ರ ಬಜೆಟ್‌ನಿಂದ ಅನ್ಯಾಯವಾಗಿದೆ. ಇಷ್ಟು ನಿರಾಶೆ, ನಿರ್ಲಕ್ಷ್ಯ ಮಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಕೇಂದ್ರ ಬಜೆಟ್‌ ಬಗ್ಗೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಕಟ್ಟುವ ಎರಡನೇ ಅತಿದೊಡ್ಡ ರಾಜ್ಯ ನಮ್ಮದು. ಐಟಿ ರಫ್ತಿನಲ್ಲಿ ನಾವೇ ಮುಂದಿದ್ದೇವೆ. ಆದರೂ ನಮಗೆ ಈ ಬಜೆಟ್‌ನಲ್ಲಿ ಸ್ವಲ್ಪವೂ ಅನುಕೂಲ ಆಗಿಲ್ಲ ಎಂದು ಕಿಡಿಕಾರಿದರು.

ಬಜೆಟ್‌ ಪೂರ್ವ ಸಭೆಯಲ್ಲಿ ಪ್ರಧಾನಮಂತ್ರಿಗಳಿಗೆ, ಹಣಕಾಸು ಸಚಿವರಿಗೆ ರಾಜ್ಯಕ್ಕೆ ಅನುದಾನಕ್ಕಾಗಿ ಮನವಿ ಮಾಡಿದ್ದೇವು. ಆದರೆ ಏನು ಪ್ರಯೋಜನವಾಗಿಲ್ಲ. ತೆರಿಗೆ ವಿನಾಯಿತಿ ದೊಡ್ಡ ವಿಷಯ ಅಲ್ಲ. ಎಷ್ಟು ಜನ ಟ್ಯಾಕ್ಸ್‌ ಕಟ್ಟೋರು ಇದ್ದಾರೆ. ಬೆಲೆ ಏರಿಕೆ ಜಾಸ್ತಿ ಆಗಿದೆ. ಈ ಬಜೆಟ್‌ನಿಂದ ದೊಡ್ಡ ಪ್ರಯೋಜನ ಏನಿಲ್ಲ ಎಂದು ಹೇಳಿದರು.

ಬಜೆಟ್‌ನ ಪ್ರತಿಯೊಂದು ಲೈನ್‌ ಓದಿದೆ. ಬಜೆಟ್‌ ಓದಬೇಕು ಓದಿದ್ದಾರೆ. ಬೇರೆ ರಾಜ್ಯಗಳ ಸುದ್ದಿ ಬೇಡ, ಕರ್ನಾಟಕ ರಾಜ್ಯಕ್ಕೆ 5,000 ಕೋಟಿ ರೂ. ನೀಡುತ್ತೇವೆ ಎಂದರು ಕೊಟ್ಟರಾ? ಹಾಗೆಯೇ ಇತರೆ ರಾಜ್ಯಗಳಿಗೂ ಆಗಬಹುದು ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

4 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

13 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

23 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago