ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್ ಇದಾಗಿದೆ ಹಾಗೂ ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ರೈತಪರ ಆಲೋಚನೆಗಳಿಗೆ 2025ನೇ ಸಾಲಿನ ಬಜೆಟ್ ಕೈಗನ್ನಡಿ ಆಗಿದೆ. ಸಾವಯವ ಕೃಷಿಗೆ ಉತ್ತೇಜನ, ಕೃಷಿಯಲ್ಲಿ ಸುಸ್ಥಿರತೆಗೆ ಒತ್ತು, ರೈತರ ವೆಚ್ಚ ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ರೈತರು ಸಶಕ್ತಗೊಂಡು ಉತ್ತಮ ಆದಾಯ ಗಳಿಸುವ, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ಮತ್ತು ಭವಿಷ್ಯದ ಸವಾಲುಗಳಿಗೆ ಭಾರತೀಯ ಕೃಷಿಯನ್ನು ಸಜ್ಜುಗೊಳಿಸುವ ಆಯವ್ಯಯ ಇದಾಗಿದೆ ಎಂದು ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…