ಸೂರತ್: ಗುಜರಾತ್ನ ಸೂರತ್ನಲ್ಲಿ ಶನಿವಾರ(ಜು.6) ಆರು ಅಂತಸ್ತಿನ ಕಟ್ಟಡ ಕುಸಿತ ಉಂಟಾಗಿದ್ದು, ರಾತ್ರಿಯಿಡಿ ಹಾಗೂ ಭಾನುವಾರ ಕಾರ್ಯಚರಣೆ ನಡೆಸಿ ಆರು ಮೃತದೇಹಗಳನ್ನು ಹೊರತೆಗಿದ್ದು, ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಟ್ಟಡದ ಬಾಡಿಗೆ ಸಂಗ್ರಹಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮಾಲೀಕರ ವಿರುದ್ಧವು ಎಫ್ಐಆರ್ ದಾಖಲಾಗಿದೆ ಎಂದರು.
ಸೂರತ್ ಸಚಿನ್ ಪಾಲಿ ಗ್ರಾಮದಲ್ಲಿ ಶನಿವಾರ ಸುಮಾರು ೬ ಅಂತಸ್ತಿನ ಅಪಾರ್ಟ್ ಮೆಂಟ್ ಕುಸಿದಿದೆ. ತಡರಾತ್ರಿ ಈ ದುರಂತ ಸಂಭವಿಸಿದ್ದು ರಾತ್ರಿ ಕಟ್ಟಡದಲ್ಲಿ ಮಲಗಿದ್ದ ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದರು. ತಕ್ಷಣವೇ ಎನ್ಡಿಆರ್ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಚರಣೆ ಆರಂಭಿಸಿದ್ದರು.
ಕಾರ್ಯಾಚರಣೆ ನಡೆಸಿ ಈವರೆಗೂ 7 ಮೃತ ದೇಹಗಳನ್ನು ಹೊರ ತಂದಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ 6 ರಿಂದ 7 ಮಂದಿ ಸಿಲುಕಿರುವ ಸಾಧ್ಯತೆ ಇದೆ. ಅಂತೆಯೇ 15 ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.
2017 ರಲ್ಲಿ ನಿರ್ಮಿಸಲಾಗಿದ್ದ ಈ ಅಪಾರ್ಟ್ ಮೆಂಟ್ ನಲ್ಲಿ ಐದು ಕುಟುಂಬಗಳು ವಾಸಿಸುತ್ತಿದ್ದವು. ಕುಸಿತ ಸಂಭವಿಸಿದಾಗ ಹಲವಾರು ನಿವಾಸಿಗಳು ಕೆಲಸದಲ್ಲಿದ್ದರು. ಆದರೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಹೊರಗೆ ಹೋಗಿದ್ದರು. ಕಟ್ಟಡವು ಕೇವಲ ಎಂಟು ವರ್ಷಗಳಷ್ಟು ಹಳೆಯದಾಗಿದ್ದರೂ, ಹೆಚ್ಚಿನ ಫ್ಲ್ಯಾಟ್ಗಳು ಖಾಲಿ ಮತ್ತು ಶಿಥಿಲಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…