ಮುಂಬೈ: ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ರಾಮಮಂದಿರಕ್ಕೆ ಬುಲ್ಡೋಜರ್ ಬಿಡುತ್ತಾರೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಇಂಡಿಯಾ ಕೂಟದ ನಾಯಕರು ಶನಿವಾರ(ಮೇ.18) ತೀವ್ರವಾಗಿ ಖಂಡಿಸಿದ್ದಾರೆ.
ಮುಂಬೈನಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಜಂಟಿ ಪತ್ರಿಕಗೋಷ್ಠಿ ನಡೆಸಿ ಮೋದಿ ಹೇಳಿಕೆಯನ್ನು ಖಾರವಾಗಿ ಪ್ರಶ್ನಿಸಿದರು.
ನಾವು ಎಂದೂ ಯಾರ ಮೇಲೆಯೂ ಬುಲ್ಡೋಜರ್ ಪ್ರಯೋಗಿಸಿಲ್ಲ. ಬುಲ್ಡೋಜರ್ ಸಂಸ್ಕೃತಿ ಇರುವುದು ಅವರ ಸರ್ಕಾರದಲ್ಲೇ. ಮೋದಿಗೆ ಸುಳ್ಳು ಹೇಳುವ ಚಾಳಿ ಇದೆ. ಕಾಂಗ್ರೆಸ್ ಎಂದೂ ಮಾಡದ ಕೆಲಸಗಳ ಬಗ್ಗೆ ಮಾತನಾಡಿ ಜನರನ್ನು ಪ್ರಜೋದಿಸುತ್ತಾರೆ ಎವರೊಬ್ಬ ಸುಳ್ಳುಗಾರ ಎಂದು ಖರ್ಗೆ ವಾಗ್ದಾಳಿ ಮಾಡಿದರು.
ಮೋದಿ ಜನರನ್ನು ಪ್ರಜೋದಿಸಲು ಅಂತಹ ಹೇಳಿಕೆ ನೀಡಿದ್ದಾರೆ. ಚುನಾವಣೆ ಆಯೋಗವು ಮೋದಿ ವಿರುದ್ಧ ಕ್ರಮ ಜರುಗಿಸಬೇಕು. ನಾವು ಎಲ್ಲರನ್ನು ರಕ್ಷಿಸುತ್ತೇವೆ. ಸಂವಿಧಾನದ ಪ್ರಕಾರ ಕೆಲಸ ನಿರ್ವಹಿಸುತ್ತಿದ್ದೇವೆ ಎಂದರು.
ಮೋದಿ ಹಾಗೂ ಬಿಜೆಪಿ ಎಲ್ಲೇ ಹೋದರು ವಿಭಜನೆ ಮಾಡುವ ಬಗ್ಗೆಯೇ ಚಿಂತಿಸಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇಂಡಿಯಾ ಕೂಟವು ಅಯೋಧ್ಯ ರಾಮಮಂದಿರದ ನಿರ್ಮಾಣವನ್ನು ಪೂರ್ಣಗೊಳಿಸುತ್ತದೆ. ಜೊತೆಗೆ ಎಲ್ಲ ಧರ್ಮಗಳ ಪ್ರರ್ಥನಾ ಮಂದಿರಗಳನ್ನೂ ರಕ್ಷಿಸುವುದು ಸರ್ಕಾರದ ಜವಾಬ್ದಾರಿಗಳು ಎಂದು ಇಂಡಿಯಾ ಒಕ್ಕೂಟದ ನಾಯಕರು ಪ್ರತಿಪಾದಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಇನ್ನಿತರರು ಇದ್ದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…