ದೇಶ- ವಿದೇಶ

ಬುಲ್ಡೋಜರ್‌ ಸಂಸ್ಕೃತಿ ನಮ್ಮದಲ್ಲ ಬಿಜೆಪಿ ಸರ್ಕಾರದ್ದು: ಮೋದಿ ಹೇಳಿಕೆಗೆ ʻಇಂಡಿಯಾʼ ಖಂಡನೆ

ಮುಂಬೈ: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ರಾಮಮಂದಿರಕ್ಕೆ ಬುಲ್ಡೋಜರ್‌ ಬಿಡುತ್ತಾರೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಇಂಡಿಯಾ ಕೂಟದ ನಾಯಕರು ಶನಿವಾರ(ಮೇ.18) ತೀವ್ರವಾಗಿ ಖಂಡಿಸಿದ್ದಾರೆ.

ಮುಂಬೈನಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಜಂಟಿ ಪತ್ರಿಕಗೋಷ್ಠಿ ನಡೆಸಿ ಮೋದಿ ಹೇಳಿಕೆಯನ್ನು ಖಾರವಾಗಿ ಪ್ರಶ್ನಿಸಿದರು.

ನಾವು ಎಂದೂ ಯಾರ ಮೇಲೆಯೂ ಬುಲ್ಡೋಜರ್‌ ಪ್ರಯೋಗಿಸಿಲ್ಲ. ಬುಲ್ಡೋಜರ್‌ ಸಂಸ್ಕೃತಿ ಇರುವುದು ಅವರ ಸರ್ಕಾರದಲ್ಲೇ. ಮೋದಿಗೆ ಸುಳ್ಳು ಹೇಳುವ ಚಾಳಿ ಇದೆ. ಕಾಂಗ್ರೆಸ್‌ ಎಂದೂ ಮಾಡದ ಕೆಲಸಗಳ ಬಗ್ಗೆ ಮಾತನಾಡಿ ಜನರನ್ನು ಪ್ರಜೋದಿಸುತ್ತಾರೆ ಎವರೊಬ್ಬ ಸುಳ್ಳುಗಾರ ಎಂದು ಖರ್ಗೆ ವಾಗ್ದಾಳಿ ಮಾಡಿದರು.

ಮೋದಿ ಜನರನ್ನು ಪ್ರಜೋದಿಸಲು ಅಂತಹ ಹೇಳಿಕೆ ನೀಡಿದ್ದಾರೆ. ಚುನಾವಣೆ ಆಯೋಗವು ಮೋದಿ ವಿರುದ್ಧ ಕ್ರಮ ಜರುಗಿಸಬೇಕು. ನಾವು ಎಲ್ಲರನ್ನು ರಕ್ಷಿಸುತ್ತೇವೆ. ಸಂವಿಧಾನದ ಪ್ರಕಾರ ಕೆಲಸ ನಿರ್ವಹಿಸುತ್ತಿದ್ದೇವೆ ಎಂದರು.

ಮೋದಿ ಹಾಗೂ ಬಿಜೆಪಿ ಎಲ್ಲೇ ಹೋದರು ವಿಭಜನೆ ಮಾಡುವ ಬಗ್ಗೆಯೇ ಚಿಂತಿಸಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇಂಡಿಯಾ ಕೂಟವು ಅಯೋಧ್ಯ ರಾಮಮಂದಿರದ ನಿರ್ಮಾಣವನ್ನು ಪೂರ್ಣಗೊಳಿಸುತ್ತದೆ. ಜೊತೆಗೆ ಎಲ್ಲ ಧರ್ಮಗಳ ಪ್ರರ್ಥನಾ ಮಂದಿರಗಳನ್ನೂ ರಕ್ಷಿಸುವುದು ಸರ್ಕಾರದ ಜವಾಬ್ದಾರಿಗಳು ಎಂದು ಇಂಡಿಯಾ ಒಕ್ಕೂಟದ ನಾಯಕರು ಪ್ರತಿಪಾದಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಸೇನಾ ಅಧ್ಯಕ್ಷ ಉದ್ಧವ್‌ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಸೇರಿದಂತೆ ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

2 hours ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

2 hours ago

ಕಡಂಗಮರೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ

ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ…

2 hours ago

ಗುಂಡ್ಲುಪೇಟೆ: ಟಿಪ್ಪರ್‌ಗಳಿಗೆ ಬೀಳಬೇಕಿದೆ ಬ್ರೇಕ್

ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್‌ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ…

2 hours ago