ದೇಶ- ವಿದೇಶ

ಬುಲ್ಡೋಜರ್‌ ಸಂಸ್ಕೃತಿ ನಮ್ಮದಲ್ಲ ಬಿಜೆಪಿ ಸರ್ಕಾರದ್ದು: ಮೋದಿ ಹೇಳಿಕೆಗೆ ʻಇಂಡಿಯಾʼ ಖಂಡನೆ

ಮುಂಬೈ: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ರಾಮಮಂದಿರಕ್ಕೆ ಬುಲ್ಡೋಜರ್‌ ಬಿಡುತ್ತಾರೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಇಂಡಿಯಾ ಕೂಟದ ನಾಯಕರು ಶನಿವಾರ(ಮೇ.18) ತೀವ್ರವಾಗಿ ಖಂಡಿಸಿದ್ದಾರೆ.

ಮುಂಬೈನಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಜಂಟಿ ಪತ್ರಿಕಗೋಷ್ಠಿ ನಡೆಸಿ ಮೋದಿ ಹೇಳಿಕೆಯನ್ನು ಖಾರವಾಗಿ ಪ್ರಶ್ನಿಸಿದರು.

ನಾವು ಎಂದೂ ಯಾರ ಮೇಲೆಯೂ ಬುಲ್ಡೋಜರ್‌ ಪ್ರಯೋಗಿಸಿಲ್ಲ. ಬುಲ್ಡೋಜರ್‌ ಸಂಸ್ಕೃತಿ ಇರುವುದು ಅವರ ಸರ್ಕಾರದಲ್ಲೇ. ಮೋದಿಗೆ ಸುಳ್ಳು ಹೇಳುವ ಚಾಳಿ ಇದೆ. ಕಾಂಗ್ರೆಸ್‌ ಎಂದೂ ಮಾಡದ ಕೆಲಸಗಳ ಬಗ್ಗೆ ಮಾತನಾಡಿ ಜನರನ್ನು ಪ್ರಜೋದಿಸುತ್ತಾರೆ ಎವರೊಬ್ಬ ಸುಳ್ಳುಗಾರ ಎಂದು ಖರ್ಗೆ ವಾಗ್ದಾಳಿ ಮಾಡಿದರು.

ಮೋದಿ ಜನರನ್ನು ಪ್ರಜೋದಿಸಲು ಅಂತಹ ಹೇಳಿಕೆ ನೀಡಿದ್ದಾರೆ. ಚುನಾವಣೆ ಆಯೋಗವು ಮೋದಿ ವಿರುದ್ಧ ಕ್ರಮ ಜರುಗಿಸಬೇಕು. ನಾವು ಎಲ್ಲರನ್ನು ರಕ್ಷಿಸುತ್ತೇವೆ. ಸಂವಿಧಾನದ ಪ್ರಕಾರ ಕೆಲಸ ನಿರ್ವಹಿಸುತ್ತಿದ್ದೇವೆ ಎಂದರು.

ಮೋದಿ ಹಾಗೂ ಬಿಜೆಪಿ ಎಲ್ಲೇ ಹೋದರು ವಿಭಜನೆ ಮಾಡುವ ಬಗ್ಗೆಯೇ ಚಿಂತಿಸಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇಂಡಿಯಾ ಕೂಟವು ಅಯೋಧ್ಯ ರಾಮಮಂದಿರದ ನಿರ್ಮಾಣವನ್ನು ಪೂರ್ಣಗೊಳಿಸುತ್ತದೆ. ಜೊತೆಗೆ ಎಲ್ಲ ಧರ್ಮಗಳ ಪ್ರರ್ಥನಾ ಮಂದಿರಗಳನ್ನೂ ರಕ್ಷಿಸುವುದು ಸರ್ಕಾರದ ಜವಾಬ್ದಾರಿಗಳು ಎಂದು ಇಂಡಿಯಾ ಒಕ್ಕೂಟದ ನಾಯಕರು ಪ್ರತಿಪಾದಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಸೇನಾ ಅಧ್ಯಕ್ಷ ಉದ್ಧವ್‌ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಸೇರಿದಂತೆ ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

11 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

11 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

11 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

11 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

11 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

12 hours ago