ಚೆನ್ನೈ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಆಯೋಜಿಸಿದ್ದ ಎತ್ತಿನ ಬಂಡಿ ಓಟಕ್ಕೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದೆ.
ಭಾರತೀಯರಿಗೆ ತಮ್ಮ ಸ್ವಾಂತ್ರ್ಯೋತ್ಸವ ಆಚರಿಸಲು ಅವಕಾಶವಿಲ್ಲ ಎಂಬ ಸಂದೇಶ ನೀಡಲು ತಾನು ಬಯಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಟಿ ರಾಜಾ ಮತ್ತು ಕೆ ಕುಮಾರೇಶ್ ಬಾಬು ಅವರಿದ್ದ ಪೀಠ ತಿಳಿಸಿದೆ.
“ಅರ್ಜಿದಾರರು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಂಡಿ ಓಟ ನಡೆಸಲು ಮುಂದಾದಾಗ, ಅವರ ಮನವಿಗೆ ಅಡ್ಡ ಬರುವುದು ಭಾರತೀಯರಿಗೆ ಸ್ವಾತಂತ್ರ್ಯ ದಿನ ಆಚರಿಸಲು ಅವಕಾಶ ನೀಡುತ್ತಿಲ್ಲ ಎಂಬ ಸಂದೇಶ ರವಾನಿಸಿದಂತಾಗುತ್ತದೆ ಎಂದು ನಾವು ಆತಂಕಿತರಾಗಿದ್ದೇವೆ. ಆದ್ದರಿಂದ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದಾಗ ಅವುಗಳನ್ನು ಶಾಲಾ-ಕಾಲೇಜು ಮತ್ತಿತರ ಸಂಸ್ಥೆಗಳು ಆಯೋಜಿಸುವ ಸ್ಪರ್ಧೆಗೆ ಸಮನಾಗಿ ನೋಡಬೇಕು, ”ಎಂದು ನ್ಯಾಯಾಲಯ ಹೇಳಿತು.
ಎತ್ತಿನ ಬಂಡಿ ಸ್ಪರ್ಧೆ ಸಾಂಸ್ಕೃತಿಕ ಕಾರ್ಯಕ್ರಮವಾಗಿದ್ದು, ಇದನ್ನು ಜಲ್ಲಿಕಟ್ಟು ರೀತಿಯಲ್ಲಿಯೇ ಹಲವು ವರ್ಷಗಳಿಂದ ಆಚರಿಸಲಾಗುತ್ತಿದೆ ಎಂದು ನ್ಯಾಯಾಲಯ ತಿಳಿಸಿತು. ಎತ್ತುಗಳಿಗೆ ಅಮಲಿನ ಪದಾರ್ಥಗಳನ್ನು ನೀಡಲಾಗಿರುತ್ತದೆ ಎಂಬ ರಾಜ್ಯ ಸರ್ಕಾರದ ವಾದವನ್ನು ಒಪ್ಪಿಕೊಳ್ಳಲು ಪೀಠವು ನಿರಾಕರಿಸಿತು. ಇದೊಂದು ಕ್ಷುಲ್ಲಕ ಊಹೆ ಎಂದು ಅದು ಹೇಳಿತು.
ಈರೋಡ್ ಜಿಲ್ಲೆಯಲ್ಲಿ ಎತ್ತಿನ ಬಂಡಿ ಓಟ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅನುಮತಿ ನೀಡುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡಬಹುದು. ಸಂಚಾರ ದಟ್ಟಣೆ ಉಂಟಾಗಲಿದೆ. ಸಾರ್ವಜನಿಕರಿಗೆ ಅನಾನುಕೂಲವಾಗಲಿದೆ ಎಂದು ಸರ್ಕಾರ ವಾದಿಸಿತ್ತು.
ಆದರೆ ಸ್ಪರ್ಧೆ ನಡೆಯುವ ದಿನ ಭಾನುವಾರವಾದ್ದರಿಂದ (ಆಗಸ್ಟ್ 14) ಶಾಲಾ ಕಾಲೇಜುಗಳು ಮುಚ್ಚಿದ್ದು ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಮನುಷ್ಯರು ಮತ್ತು ಪ್ರಾಣಿಗಳಿಗೆ ಆರೋಗ್ಯ ತಪಾಸಣೆಗೂ ಅವಕಾಶ ಕಲ್ಪಿಸಿರುವುದನ್ನು ಗಮನಿಸಿ ಅನುಮತಿ ನೀಡಲಾಯಿತು. ಆದರೆ ಜೂಜಾಟ ಬೆಟ್ಟಿಂಗ್ನಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಸ್ಪರ್ಧೆ ವೇಳೆ ಅವಕಾಶ ನೀಡುವಂತಿಲ್ಲ ಎಂದು ತಾಕೀತು ಮಾಡಿತು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…