ದೇಶ- ವಿದೇಶ

ಸ್ವಾತಂತ್ರ್ಯೋತ್ಸವದ ಅಂಗವಾಗಿ  ಎತ್ತಿನ ಬಂಡಿ ಸ್ಪರ್ಧೆ: ಮದ್ರಾಸ್ ಹೈಕೋರ್ಟ್ ಅನುಮತಿ

ಚೆನ್ನೈ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಆಯೋಜಿಸಿದ್ದ ಎತ್ತಿನ ಬಂಡಿ ಓಟಕ್ಕೆ ಮದ್ರಾಸ್‌ ಹೈಕೋರ್ಟ್‌  ಅನುಮತಿ ನೀಡಿದೆ.

ಭಾರತೀಯರಿಗೆ ತಮ್ಮ ಸ್ವಾಂತ್ರ್ಯೋತ್ಸವ ಆಚರಿಸಲು ಅವಕಾಶವಿಲ್ಲ ಎಂಬ ಸಂದೇಶ ನೀಡಲು ತಾನು ಬಯಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಟಿ ರಾಜಾ ಮತ್ತು ಕೆ ಕುಮಾರೇಶ್ ಬಾಬು ಅವರಿದ್ದ ಪೀಠ ತಿಳಿಸಿದೆ.

“ಅರ್ಜಿದಾರರು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಂಡಿ ಓಟ ನಡೆಸಲು ಮುಂದಾದಾಗ, ಅವರ ಮನವಿಗೆ ಅಡ್ಡ ಬರುವುದು ಭಾರತೀಯರಿಗೆ ಸ್ವಾತಂತ್ರ್ಯ ದಿನ ಆಚರಿಸಲು ಅವಕಾಶ ನೀಡುತ್ತಿಲ್ಲ ಎಂಬ ಸಂದೇಶ ರವಾನಿಸಿದಂತಾಗುತ್ತದೆ ಎಂದು ನಾವು ಆತಂಕಿತರಾಗಿದ್ದೇವೆ. ಆದ್ದರಿಂದ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದಾಗ ಅವುಗಳನ್ನು ಶಾಲಾ-ಕಾಲೇಜು ಮತ್ತಿತರ ಸಂಸ್ಥೆಗಳು ಆಯೋಜಿಸುವ ಸ್ಪರ್ಧೆಗೆ ಸಮನಾಗಿ ನೋಡಬೇಕು, ”ಎಂದು ನ್ಯಾಯಾಲಯ ಹೇಳಿತು.

ಎತ್ತಿನ ಬಂಡಿ ಸ್ಪರ್ಧೆ ಸಾಂಸ್ಕೃತಿಕ ಕಾರ್ಯಕ್ರಮವಾಗಿದ್ದು, ಇದನ್ನು ಜಲ್ಲಿಕಟ್ಟು ರೀತಿಯಲ್ಲಿಯೇ ಹಲವು ವರ್ಷಗಳಿಂದ ಆಚರಿಸಲಾಗುತ್ತಿದೆ ಎಂದು ನ್ಯಾಯಾಲಯ ತಿಳಿಸಿತು. ಎತ್ತುಗಳಿಗೆ ಅಮಲಿನ ಪದಾರ್ಥಗಳನ್ನು ನೀಡಲಾಗಿರುತ್ತದೆ ಎಂಬ ರಾಜ್ಯ ಸರ್ಕಾರದ ವಾದವನ್ನು ಒಪ್ಪಿಕೊಳ್ಳಲು ಪೀಠವು ನಿರಾಕರಿಸಿತು. ಇದೊಂದು ಕ್ಷುಲ್ಲಕ ಊಹೆ ಎಂದು ಅದು ಹೇಳಿತು.

ಈರೋಡ್‌ ಜಿಲ್ಲೆಯಲ್ಲಿ ಎತ್ತಿನ ಬಂಡಿ ಓಟ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅನುಮತಿ ನೀಡುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡಬಹುದು. ಸಂಚಾರ ದಟ್ಟಣೆ ಉಂಟಾಗಲಿದೆ. ಸಾರ್ವಜನಿಕರಿಗೆ ಅನಾನುಕೂಲವಾಗಲಿದೆ ಎಂದು ಸರ್ಕಾರ ವಾದಿಸಿತ್ತು.

ಆದರೆ ಸ್ಪರ್ಧೆ ನಡೆಯುವ ದಿನ ಭಾನುವಾರವಾದ್ದರಿಂದ (ಆಗಸ್ಟ್ 14) ಶಾಲಾ ಕಾಲೇಜುಗಳು ಮುಚ್ಚಿದ್ದು ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಮನುಷ್ಯರು ಮತ್ತು ಪ್ರಾಣಿಗಳಿಗೆ ಆರೋಗ್ಯ ತಪಾಸಣೆಗೂ ಅವಕಾಶ ಕಲ್ಪಿಸಿರುವುದನ್ನು ಗಮನಿಸಿ ಅನುಮತಿ ನೀಡಲಾಯಿತು. ಆದರೆ ಜೂಜಾಟ ಬೆಟ್ಟಿಂಗ್‌ನಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಸ್ಪರ್ಧೆ ವೇಳೆ ಅವಕಾಶ ನೀಡುವಂತಿಲ್ಲ ಎಂದು ತಾಕೀತು ಮಾಡಿತು.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago