ದೇಶ- ವಿದೇಶ

ಸ್ವಾತಂತ್ರ್ಯೋತ್ಸವದ ಅಂಗವಾಗಿ  ಎತ್ತಿನ ಬಂಡಿ ಸ್ಪರ್ಧೆ: ಮದ್ರಾಸ್ ಹೈಕೋರ್ಟ್ ಅನುಮತಿ

ಚೆನ್ನೈ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಆಯೋಜಿಸಿದ್ದ ಎತ್ತಿನ ಬಂಡಿ ಓಟಕ್ಕೆ ಮದ್ರಾಸ್‌ ಹೈಕೋರ್ಟ್‌  ಅನುಮತಿ ನೀಡಿದೆ.

ಭಾರತೀಯರಿಗೆ ತಮ್ಮ ಸ್ವಾಂತ್ರ್ಯೋತ್ಸವ ಆಚರಿಸಲು ಅವಕಾಶವಿಲ್ಲ ಎಂಬ ಸಂದೇಶ ನೀಡಲು ತಾನು ಬಯಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಟಿ ರಾಜಾ ಮತ್ತು ಕೆ ಕುಮಾರೇಶ್ ಬಾಬು ಅವರಿದ್ದ ಪೀಠ ತಿಳಿಸಿದೆ.

“ಅರ್ಜಿದಾರರು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಂಡಿ ಓಟ ನಡೆಸಲು ಮುಂದಾದಾಗ, ಅವರ ಮನವಿಗೆ ಅಡ್ಡ ಬರುವುದು ಭಾರತೀಯರಿಗೆ ಸ್ವಾತಂತ್ರ್ಯ ದಿನ ಆಚರಿಸಲು ಅವಕಾಶ ನೀಡುತ್ತಿಲ್ಲ ಎಂಬ ಸಂದೇಶ ರವಾನಿಸಿದಂತಾಗುತ್ತದೆ ಎಂದು ನಾವು ಆತಂಕಿತರಾಗಿದ್ದೇವೆ. ಆದ್ದರಿಂದ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದಾಗ ಅವುಗಳನ್ನು ಶಾಲಾ-ಕಾಲೇಜು ಮತ್ತಿತರ ಸಂಸ್ಥೆಗಳು ಆಯೋಜಿಸುವ ಸ್ಪರ್ಧೆಗೆ ಸಮನಾಗಿ ನೋಡಬೇಕು, ”ಎಂದು ನ್ಯಾಯಾಲಯ ಹೇಳಿತು.

ಎತ್ತಿನ ಬಂಡಿ ಸ್ಪರ್ಧೆ ಸಾಂಸ್ಕೃತಿಕ ಕಾರ್ಯಕ್ರಮವಾಗಿದ್ದು, ಇದನ್ನು ಜಲ್ಲಿಕಟ್ಟು ರೀತಿಯಲ್ಲಿಯೇ ಹಲವು ವರ್ಷಗಳಿಂದ ಆಚರಿಸಲಾಗುತ್ತಿದೆ ಎಂದು ನ್ಯಾಯಾಲಯ ತಿಳಿಸಿತು. ಎತ್ತುಗಳಿಗೆ ಅಮಲಿನ ಪದಾರ್ಥಗಳನ್ನು ನೀಡಲಾಗಿರುತ್ತದೆ ಎಂಬ ರಾಜ್ಯ ಸರ್ಕಾರದ ವಾದವನ್ನು ಒಪ್ಪಿಕೊಳ್ಳಲು ಪೀಠವು ನಿರಾಕರಿಸಿತು. ಇದೊಂದು ಕ್ಷುಲ್ಲಕ ಊಹೆ ಎಂದು ಅದು ಹೇಳಿತು.

ಈರೋಡ್‌ ಜಿಲ್ಲೆಯಲ್ಲಿ ಎತ್ತಿನ ಬಂಡಿ ಓಟ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅನುಮತಿ ನೀಡುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡಬಹುದು. ಸಂಚಾರ ದಟ್ಟಣೆ ಉಂಟಾಗಲಿದೆ. ಸಾರ್ವಜನಿಕರಿಗೆ ಅನಾನುಕೂಲವಾಗಲಿದೆ ಎಂದು ಸರ್ಕಾರ ವಾದಿಸಿತ್ತು.

ಆದರೆ ಸ್ಪರ್ಧೆ ನಡೆಯುವ ದಿನ ಭಾನುವಾರವಾದ್ದರಿಂದ (ಆಗಸ್ಟ್ 14) ಶಾಲಾ ಕಾಲೇಜುಗಳು ಮುಚ್ಚಿದ್ದು ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಮನುಷ್ಯರು ಮತ್ತು ಪ್ರಾಣಿಗಳಿಗೆ ಆರೋಗ್ಯ ತಪಾಸಣೆಗೂ ಅವಕಾಶ ಕಲ್ಪಿಸಿರುವುದನ್ನು ಗಮನಿಸಿ ಅನುಮತಿ ನೀಡಲಾಯಿತು. ಆದರೆ ಜೂಜಾಟ ಬೆಟ್ಟಿಂಗ್‌ನಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಸ್ಪರ್ಧೆ ವೇಳೆ ಅವಕಾಶ ನೀಡುವಂತಿಲ್ಲ ಎಂದು ತಾಕೀತು ಮಾಡಿತು.

andolana

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

13 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

13 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

13 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

13 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago