bus burnt
ಆಫ್ಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ.
ಆಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಟ್ರಕ್ ಮತ್ತು ಬೈಕ್ಗೆ ಡಿಕ್ಕಿ ಹೊಡೆದ ನಂತರ ಬಸ್ಗೆ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರದ ವಕ್ತಾರ ಅಹ್ಮದುಲ್ಲಾ ಮುತ್ತಕಿ ಪೋಸ್ಟ್ ಮಾಡಿದ್ದು, ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಅಪಘಾತ ಎಂದು ಹೇಳಿದ್ದಾರೆ.
ಮೃತರಲ್ಲಿ ಹೆಚ್ಚಿನವರು ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಟ್ರಕ್ನಲ್ಲಿ ಇಬ್ಬರು ಮತ್ತು ಬೈಕ್ನಲ್ಲಿ ಇಬ್ಬರು ಇದ್ದರು. ಆಫ್ಘಾನಿಸ್ತಾನದಲ್ಲಿ ರಸ್ತೆ ಅಪಘಾತಗಳಿಗೆ ಕಾರಣಗಳು ಆಫ್ಘಾನಿಸ್ತಾನದಲ್ಲಿ ಸಂಚಾರ ಅಪಘಾತಗಳು ಸಾಮಾನ್ಯ. ದಶಕಗಳ ಸಂಘರ್ಷ, ಕೆಟ್ಟ ರಸ್ತೆಗಳು, ಹೆದ್ದಾರಿಗಳಲ್ಲಿ ಅಪಾಯಕಾರಿ ಚಾಲನೆ ಮತ್ತು ನಿಯಮಗಳನ್ನು ನಿರ್ಲಕ್ಷಿಸುವುದು ಸೇರಿದಂತೆ ರಸ್ತೆ ಅಪಘಾತಗಳಿಗೆ ಹಲವು ಕಾರಣಗಳಿವೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…