ದೇಶ- ವಿದೇಶ

ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿ: 71 ಮಂದಿ ಸುಟ್ಟು ಕರಕಲು

ಆಫ್ಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ.

ಆಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಟ್ರಕ್ ಮತ್ತು ಬೈಕ್‍ಗೆ ಡಿಕ್ಕಿ ಹೊಡೆದ ನಂತರ ಬಸ್‍ಗೆ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರದ ವಕ್ತಾರ ಅಹ್ಮದುಲ್ಲಾ ಮುತ್ತಕಿ ಪೋಸ್ಟ್ ಮಾಡಿದ್ದು, ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಅಪಘಾತ ಎಂದು ಹೇಳಿದ್ದಾರೆ.

ಮೃತರಲ್ಲಿ ಹೆಚ್ಚಿನವರು ಬಸ್‍ನಲ್ಲಿ ಪ್ರಯಾಣಿಸುತ್ತಿದ್ದರು. ಟ್ರಕ್‍ನಲ್ಲಿ ಇಬ್ಬರು ಮತ್ತು ಬೈಕ್‍ನಲ್ಲಿ ಇಬ್ಬರು ಇದ್ದರು. ಆಫ್ಘಾನಿಸ್ತಾನದಲ್ಲಿ ರಸ್ತೆ ಅಪಘಾತಗಳಿಗೆ ಕಾರಣಗಳು ಆಫ್ಘಾನಿಸ್ತಾನದಲ್ಲಿ ಸಂಚಾರ ಅಪಘಾತಗಳು ಸಾಮಾನ್ಯ. ದಶಕಗಳ ಸಂಘರ್ಷ, ಕೆಟ್ಟ ರಸ್ತೆಗಳು, ಹೆದ್ದಾರಿಗಳಲ್ಲಿ ಅಪಾಯಕಾರಿ ಚಾಲನೆ ಮತ್ತು ನಿಯಮಗಳನ್ನು ನಿರ್ಲಕ್ಷಿಸುವುದು ಸೇರಿದಂತೆ ರಸ್ತೆ ಅಪಘಾತಗಳಿಗೆ ಹಲವು ಕಾರಣಗಳಿವೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

7 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

8 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

9 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

9 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

10 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

11 hours ago