ದೇಶ- ವಿದೇಶ

ಬೈಕ್‌ಗೆ ಬಸ್‌ ಡಿಕ್ಕಿ : ಗಾಢ ನಿದ್ರೆಯಲ್ಲಿದ್ದ 20 ಮಂದಿ ಪ್ರಯಾಣಿಕರು ಸುಟ್ಟು ಭಸ್ಮ…..

ಕರ್ನೂಲ್‌ : ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು, ಕನಿಷ್ಠ 20 ಜನರು ಮೃತಪಟ್ಟಿದ್ದಾರೆ, ಬಸ್ಸಿನಲ್ಲಿ 42 ಪ್ರಯಾಣಿಕರಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ ಚಿನ್ನತೇಕೂರು ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ಖಾಸಗಿ ಟ್ರಾವೆಲ್ ಬಸ್ ಬೆಂಕಿಗೆ ಆಹುತಿಯಾಗಿ ಹಲವರು ಗಾಯಗೊಂಡಿದ್ದಾರೆ. ತುರ್ತು ನಿರ್ಗಮನ ಮತ್ತು ಕಿಟಕಿ ಗಾಜುಗಳನ್ನು ಒಡೆದು 12 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದರೆ, ಬೆಂಕಿಯು ವಾಹನವನ್ನು ಸುಟ್ಟುಹಾಕಿದ್ದರಿಂದ ಹಲವರು ಒಳಗೆ ಸಿಲುಕಿಕೊಂಡರು.

ಕಾವೇರಿ ಟ್ರಾವೆಲ್ಸ್ ನಿರ್ವಹಿಸುತ್ತಿದ್ದ ನೋಂದಣಿ ಸಂಖ್ಯೆ DD09 N9490 ನ್ನು ಹೊಂದಿರುವ ಈ ದುರದೃಷ್ಟಕರ ಬಸ್ ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದಾಗ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಚಿನ್ನತೇಕೂರು ಗ್ರಾಮದ ಬಳಿ ದ್ವಿಚಕ್ರ ವಾಹನವೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಅಪಘಾತದ ಪರಿಣಾಮವಾಗಿ ಬೈಕ್ ವಾಹನದ ಕೆಳಗೆ ಸಿಲುಕಿಕೊಂಡಿತು, ಕೂಡಲೇ ಬೆಂಕಿ ಹತ್ತಿಕೊಂಡು ಇಡೀ ಬಸ್ಸನ್ನು ವ್ಯಾಪಿಸಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಯಿತು.

ಇದನ್ನು ಓದಿ: ಕಸಕ್ಕೆ ಬೆಂಕಿ: ದಟ್ಟ ಹೊಗೆಯಿಂದ ಸಂಕಷ್ಟ

ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಭೇಟಿ, ಬಸ್ ಚಾಲಕ, ನಿರ್ವಾಹಕ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆದಾಗ್ಯೂ, ಪ್ರದೇಶದಲ್ಲಿ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ತೀವ್ರ ಅಡ್ಡಿಯಾಯಿತು. ಅಪಘಾತದ ನಂತರ ಬಸ್ ಚಾಲಕ ಸೇರಿದಂತೆ ಬಸ್ ಸಿಬ್ಬಂದಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿ, ವಾಹನಗಳು ಗಂಟೆಗಟ್ಟಲೆ ಸಿಲುಕಿಕೊಂಡವು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಿಎಂ ಕಂಬನಿ
ಪ್ರಸ್ತುತ ದುಬೈಗೆ ಅಧಿಕೃತ ಭೇಟಿಯಲ್ಲಿರುವ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ, ಅವರು ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿದರು. ಉನ್ನತ ಆಡಳಿತ ಸಿಬ್ಬಂದಿಗೆ ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಪ್ರಯತ್ನಗಳನ್ನು ನೋಡಿಕೊಳ್ಳಲು ನಿರ್ದೇಶನ ನೀಡಿದ್ದಾರೆ.

ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ಒದಗಿಸುವಂತೆ ಮತ್ತು ಮೃತರ ಕುಟುಂಬಗಳಿಗೆ ಬೆಂಬಲ ನೀಡಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದರು. ಹೆಚ್ಚಿನ ಸಾವುನೋವುಗಳನ್ನು ತಡೆಗಟ್ಟಲು ತ್ವರಿತ ಕ್ರಮ ಕೈಗೊಳ್ಳುವ ಅಗತ್ಯವನ್ನು ಹೇಳಿದ್ದು, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ.

ಸಚಿವರಾದ ಬಿ.ಸಿ. ಜನಾರ್ದನ ರೆಡ್ಡಿ ಮತ್ತು ಕೆ. ಅಚ್ಚನ್ನಾಯ್ಡು ಕೂಡ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

8 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

8 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

8 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

8 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago