Mysore
18
scattered clouds

Social Media

ಸೋಮವಾರ, 26 ಜನವರಿ 2026
Light
Dark

ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ.

ಅವರು ಪ್ರತಿಪಕ್ಷ ಇಂಡಿಯಾ ಒಕ್ಕೂಟದ ಬಿ.ಸುದರ್ಶನ್ ರೆಡ್ಡಿ ವಿರುದ್ಧ ಜಯಗಳಿಸಿದ್ದಾರೆ‌.

ಕಳೆದ ಜುಲೈನಲ್ಲಿ ಆರೋಗ್ಯ ಕಾರಣ ನೀಡಿ ಜಗದೀಪ್ ಧನಕರ್ ರಾಜೀನಾಮೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.

ಸಿ.ಪಿ.ರಾಧಾಕೃಷ್ಣನ್ ಪರ 452 ಮತ ಪಡೆದರೆ, ಸುದರ್ಶನ್ ರೆಡ್ಡಿ ಪರ 300 ಸದಸ್ಯರು ಮತ ಚಲಾಯಿಸಿದರು.

ಈ ಹಿನ್ನೆಲೆಯಲ್ಲಿ ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ.

Tags:
error: Content is protected !!