ಮುಂಬೈ: ಮಹಿಳೆಯರ ಮೇಲೆ ಅತಿ ಹೆಚ್ಚು ಪರಿಣಾಮ ಬೀರುತ್ತಿರುವ ಕ್ಯಾನ್ಸರ್ ವಿರುದ್ಧ ಹೋರಾಡಲು ಲಸಿಕೆ ಐದರಿಂದ ಆರು ತಿಂಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರತಾಪ್ರಾವ್ ಜಾಧವ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಆಯುಷ್ ಇಲಾಖೆ ಸಚಿವರಾದ ಪ್ರತಾಪ್ರಾವ್ ಜಾಧವ್ ಅವರು, ಒಂಭತ್ತರಿಂದ 16 ವರ್ಷ ವಯಸ್ಸಿನವರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.
ಲಸಿಕೆಯ ಕುರಿತು ಸಂಶೋಧನೆ ಬಹುತೇಕ ಪೂರ್ಣಗೊಂಡಿದೆ. ಪ್ರಯೋಗಗಳು ಕೂಡ ನಡೆಯುತ್ತಿವೆ. ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳನ್ನು ಆರಂಭಿಸಿದೆ ಎಂದರು.
30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಆಸ್ಪತ್ರೆಗಳಲ್ಲಿ ತಪಾಸಣೆಗೆ ಒಳಗಾಗಬೇಕು. ಆರಂಭಿಕ ಹಂತದಲ್ಲೇ ರೋಗ ಪತ್ತೆಗಾಗಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸುವ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸರ್ಕಾರ ಮನ್ನಾ ಮಾಡಿದೆ ಎಂದು ಹೇಳಿದರು.
ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…
ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…
ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ…
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…