ಮುಂಬೈ: ಮಹಿಳೆಯರ ಮೇಲೆ ಅತಿ ಹೆಚ್ಚು ಪರಿಣಾಮ ಬೀರುತ್ತಿರುವ ಕ್ಯಾನ್ಸರ್ ವಿರುದ್ಧ ಹೋರಾಡಲು ಲಸಿಕೆ ಐದರಿಂದ ಆರು ತಿಂಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರತಾಪ್ರಾವ್ ಜಾಧವ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಆಯುಷ್ ಇಲಾಖೆ ಸಚಿವರಾದ ಪ್ರತಾಪ್ರಾವ್ ಜಾಧವ್ ಅವರು, ಒಂಭತ್ತರಿಂದ 16 ವರ್ಷ ವಯಸ್ಸಿನವರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.
ಲಸಿಕೆಯ ಕುರಿತು ಸಂಶೋಧನೆ ಬಹುತೇಕ ಪೂರ್ಣಗೊಂಡಿದೆ. ಪ್ರಯೋಗಗಳು ಕೂಡ ನಡೆಯುತ್ತಿವೆ. ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳನ್ನು ಆರಂಭಿಸಿದೆ ಎಂದರು.
30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಆಸ್ಪತ್ರೆಗಳಲ್ಲಿ ತಪಾಸಣೆಗೆ ಒಳಗಾಗಬೇಕು. ಆರಂಭಿಕ ಹಂತದಲ್ಲೇ ರೋಗ ಪತ್ತೆಗಾಗಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸುವ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸರ್ಕಾರ ಮನ್ನಾ ಮಾಡಿದೆ ಎಂದು ಹೇಳಿದರು.
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…