ನವದೆಹಲಿ: ಗಾಳಿಪಟ ಹಾರಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಭಾಗ, ಇದನ್ನು ನಿಷೇಧಿಸಿ ಆದೇಶ ಹೊರಡಿಸಲಾಗದು ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಆದರೂ ಗಾಳಿಪಟ ಹಾರಿಸಲು ಚೀನಾದ ಮಾಂಜಾ (ಸಿಂಥೆಟಿಕ್ ದಾರ) ತೀವ್ರ ಕಳವಳಕಾರಿಯಾಗಿದ್ದು ಅದನ್ನು ನಿಷೇಧಿಸಿ ಎನ್ಜಿಟಿ ನೀಡಿರುವ ಆದೇಶ ಮತ್ತು ದೆಹಲಿ ಸರ್ಕಾರದ ಅಧಿಸೂಚನೆ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕೆಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೊಣಿಯಂ ಪ್ರಸಾದ್ ಅವರಿದ್ದ ವಿಭಾಗೀಯ ಪೀಠ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಗಾಳಿಪಟ ಹಾರಾಟ ಮತ್ತು ಚೈನೀಸ್ ಮಾಂಜಾ ಬಳಕೆಗೆ ಸಂಪೂರ್ಣ ನಿಷೇಧ ಹೇರುವಂತೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಲಾಗಿತ್ತು. ಮಾಂಜಾ ಬಳಕೆಯಿಂದ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಶು ಪಕ್ಷಿಗಳಿಗೆ ತೊಂದರೆಯಾಗುತ್ತಿದೆ ಎಂದು ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದ ಅರ್ಜಿದಾರ ಹಾಗೂ ವಕೀಲ ಸಂಸೆರ್ ಪಾಲ್ ಸಿಂಗ್ ಹೇಳಿದ್ದರು.
ಹೀಗಾಗಿ ಗಾಳಿಪಟ ತಯಾರಿಕೆ ಸಂಗ್ರಹ ಹಾಗೂ ಅದರ ಸಾಗಾಟ ಹಾಗೂ ಗಾಳಿಪಟ ಹಾರಿಸಲು ಬಳಸುವ ಎಲ್ಲಾ ಬಗೆಯ ಉಳಿದ ಉತ್ಪನ್ನಗಳ ಮೇಲೆ ಸಂಪೂರ್ಣ ನಿಷೇಧ ಹೇರಬೇಕೆಂದು ಅವರು ಕೋರಿದ್ದರು.
2017ರಲ್ಲಿ ಚೀನಾ ಮಾಂಜಾ ಮತ್ತು ಆ ರೀತಿಯ ವಸ್ತುಗಳ ಬಳಕೆಗೆ ಸಂಪೂರ್ಣ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದ್ದು, ಈ ಬಗ್ಗೆ ಪರಿಶೀಲಿಸಲು ಮೇಲ್ವಿಚಾರಣಾ ಸಮಿತಿಯನ್ನು ಕೂಡ ರಚಿಸಲಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಕೀಲರು ತಿಳಿಸಿದರು.
ಗಾಳಿಪಟ ತಯಾರಿಕೆಗಾಗಿ ನೈಲಾನ್ ಅಥವಾ ಇತರ ಸಿಂಥೆಟಿಕ್, ಜೈವಿಕ ವಿಘಟನೀಯವಲ್ಲದ ವಸ್ತುಗಳಿರುವ ದಾರದ ತಯಾರಿಕೆ, ಮಾರಾಟ, ಸಂಗ್ರಹಣೆ, ಖರೀದಿ ಮತ್ತು ಬಳಕೆಯನ್ನು ನಿಷೇಧಿಸುವ ಆದೇಶವನ್ನು ಎನ್ಜಿಟಿ ಸೆಪ್ಟೆಂಬರ್ 2020ರಲ್ಲಿ ಜಾರಿಗೊಳಿಸಿದೆ ಎಂದು ನ್ಯಾಯಾಲಯಕ್ಕೆ ವಿವರಿಸಲಾಯಿತು. ಎನ್ಜಿಟಿ ಆದೇಶ ಮತ್ತು ಸರ್ಕಾರದ ಅಧಿಸೂಚನೆಯನ್ನು ಉಲ್ಲಂಘಿಸುತ್ತಿರುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
ವಾದ ಆಲಿಸಿದ ನ್ಯಾಯಾಲಯ ಎನ್ಜಿಟಿ ನೀಡಿರುವ ಆದೇಶ ಮತ್ತು ದೆಹಲಿ ಸರ್ಕಾರದ ಅಧಿಸೂಚನೆ ಎರಡನ್ನೂ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿ ಅರ್ಜಿ ವಿಲೇವಾರಿ ಮಾಡಿತು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…