ನವದೆಹಲಿ: ಗಾಳಿಪಟ ಹಾರಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಭಾಗ, ಇದನ್ನು ನಿಷೇಧಿಸಿ ಆದೇಶ ಹೊರಡಿಸಲಾಗದು ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಆದರೂ ಗಾಳಿಪಟ ಹಾರಿಸಲು ಚೀನಾದ ಮಾಂಜಾ (ಸಿಂಥೆಟಿಕ್ ದಾರ) ತೀವ್ರ ಕಳವಳಕಾರಿಯಾಗಿದ್ದು ಅದನ್ನು ನಿಷೇಧಿಸಿ ಎನ್ಜಿಟಿ ನೀಡಿರುವ ಆದೇಶ ಮತ್ತು ದೆಹಲಿ ಸರ್ಕಾರದ ಅಧಿಸೂಚನೆ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕೆಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೊಣಿಯಂ ಪ್ರಸಾದ್ ಅವರಿದ್ದ ವಿಭಾಗೀಯ ಪೀಠ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಗಾಳಿಪಟ ಹಾರಾಟ ಮತ್ತು ಚೈನೀಸ್ ಮಾಂಜಾ ಬಳಕೆಗೆ ಸಂಪೂರ್ಣ ನಿಷೇಧ ಹೇರುವಂತೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಲಾಗಿತ್ತು. ಮಾಂಜಾ ಬಳಕೆಯಿಂದ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಶು ಪಕ್ಷಿಗಳಿಗೆ ತೊಂದರೆಯಾಗುತ್ತಿದೆ ಎಂದು ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದ ಅರ್ಜಿದಾರ ಹಾಗೂ ವಕೀಲ ಸಂಸೆರ್ ಪಾಲ್ ಸಿಂಗ್ ಹೇಳಿದ್ದರು.
ಹೀಗಾಗಿ ಗಾಳಿಪಟ ತಯಾರಿಕೆ ಸಂಗ್ರಹ ಹಾಗೂ ಅದರ ಸಾಗಾಟ ಹಾಗೂ ಗಾಳಿಪಟ ಹಾರಿಸಲು ಬಳಸುವ ಎಲ್ಲಾ ಬಗೆಯ ಉಳಿದ ಉತ್ಪನ್ನಗಳ ಮೇಲೆ ಸಂಪೂರ್ಣ ನಿಷೇಧ ಹೇರಬೇಕೆಂದು ಅವರು ಕೋರಿದ್ದರು.
2017ರಲ್ಲಿ ಚೀನಾ ಮಾಂಜಾ ಮತ್ತು ಆ ರೀತಿಯ ವಸ್ತುಗಳ ಬಳಕೆಗೆ ಸಂಪೂರ್ಣ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದ್ದು, ಈ ಬಗ್ಗೆ ಪರಿಶೀಲಿಸಲು ಮೇಲ್ವಿಚಾರಣಾ ಸಮಿತಿಯನ್ನು ಕೂಡ ರಚಿಸಲಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಕೀಲರು ತಿಳಿಸಿದರು.
ಗಾಳಿಪಟ ತಯಾರಿಕೆಗಾಗಿ ನೈಲಾನ್ ಅಥವಾ ಇತರ ಸಿಂಥೆಟಿಕ್, ಜೈವಿಕ ವಿಘಟನೀಯವಲ್ಲದ ವಸ್ತುಗಳಿರುವ ದಾರದ ತಯಾರಿಕೆ, ಮಾರಾಟ, ಸಂಗ್ರಹಣೆ, ಖರೀದಿ ಮತ್ತು ಬಳಕೆಯನ್ನು ನಿಷೇಧಿಸುವ ಆದೇಶವನ್ನು ಎನ್ಜಿಟಿ ಸೆಪ್ಟೆಂಬರ್ 2020ರಲ್ಲಿ ಜಾರಿಗೊಳಿಸಿದೆ ಎಂದು ನ್ಯಾಯಾಲಯಕ್ಕೆ ವಿವರಿಸಲಾಯಿತು. ಎನ್ಜಿಟಿ ಆದೇಶ ಮತ್ತು ಸರ್ಕಾರದ ಅಧಿಸೂಚನೆಯನ್ನು ಉಲ್ಲಂಘಿಸುತ್ತಿರುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
ವಾದ ಆಲಿಸಿದ ನ್ಯಾಯಾಲಯ ಎನ್ಜಿಟಿ ನೀಡಿರುವ ಆದೇಶ ಮತ್ತು ದೆಹಲಿ ಸರ್ಕಾರದ ಅಧಿಸೂಚನೆ ಎರಡನ್ನೂ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿ ಅರ್ಜಿ ವಿಲೇವಾರಿ ಮಾಡಿತು.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…