ನವದೆಹಲಿ: ಭಾರತದ ಬೆಳವಣಿಗೆ ಹಾದಿಯಲ್ಲಿ ಬಂಡವಾಳ ಮಾರುಕಟ್ಟೆಯ ಪಾತ್ರ ಮಹತ್ವದ್ದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಹೇಳಿದರು.
ಸೋಮವಾರ ಲೋಕಸಭೆಯಲ್ಲಿ 2023-24ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿ ಮಾತನಾಡಿದ ಅವರು, ಮಾರುಕಟ್ಟೆ ತಂತ್ರಜ್ಞಾನವು ನಾವೀನ್ಯತೆ ಹಾಗೂ ಡಿಜಿಲೀಕರಣದ ಮೂಲಕ ಇದು ಇನ್ನಷ್ಟು ವಿಸ್ತರವಾಗಿದೆ ಎಂದರು.
ಭಾರತವು ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಾಗೂ ರಾಜಕೀಯ ಸಮಸ್ಯೆ ಎದುರಿಸುತ್ತಿದ್ದರೂ ಭಾರತದ ಮಾರುಕಟ್ಟೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಬಡ್ಡಿ ದರ ಹಾಗೂ ಸರಕುಗಳ ಬೆಲೆಯಲ್ಲಿ ಏರಿಕೆಯ ನಡುವೆಯೂ ಭಾರತದ ಬಂಡವಾಳ ಮಾರುಕಟ್ಟೆಯು ಜಗತ್ತಿನಲ್ಲಿ ವೃದ್ಧಿ ಕಾಣುತ್ತಿರುವ ಅತ್ಯುತ್ತಮ ಮಾರುಕಟ್ಟೆ ಎನಿಸಿಕೊಂಡಿದೆ ಎಂದಿದ್ದಾರೆ.
ಪ್ರಸ್ತುತ ಆರ್ಥಿಕ ವರ್ಷದಲ್ಲಿ ಬಿಎಸ್ಇ ಸೆನ್ಸೆಕ್ಸ್ ಶೇ 25ರಷ್ಟು ಬೆಳವಣಿಗೆ ಕಂಡಿದೆ. ಇದು 2025 ರವರೆಗೂ ಮುಂದುವರೆಯುವ ನಂಬಿಕೆಯಿದೆ. ಜುಲೈ 3 ರಂದು 30 ಷೇರುಗಳ ಇಂಡೆಕ್ಸ್ ದಿನದ ವಹಿವಾಟಿನಲ್ಲಿ 80ಸಾವಿರದ ಗಡಿಯನ್ನು ಮೊದಲ ಬಾರಿಗೆ ದಾಟಿ ಇತಿಹಾಸ ನಿರ್ಮಿಸಿದೆ ಎಂದು ಹೇಳಿದರು.
ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…
ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…
ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…
ನವದೆಹಲಿ : ಸ್ಲೀಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…