ಅನ್ನಮಯ್ಯ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಇಂದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಉರುಳಿಬಿದ್ದಿದ್ದು, ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಚಿಂತಾಮಣಿ ತಾಲ್ಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೋಕೇಶ, ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಹಿತಿ ಪ್ರಕಾರ ಅಡುಗೆ ಕೆಲಸಕ್ಕಾಗಿ ಒಟ್ಟು ಐವರು ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಬಾವಿ ಆಳವಾಗಿದ್ದರಿಂದ ಕಾರಿನೊಳಗೆ ಮೂವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ಬಾವಿಯಲ್ಲಿ ಬಿದ್ದಿದ್ದ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಪಿಲೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





