ದೇಶ- ವಿದೇಶ

ಆಂಧ್ರಪ್ರದೇಶ| ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರು ಸಾವು

ಅನ್ನಮಯ್ಯ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಇಂದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಉರುಳಿಬಿದ್ದಿದ್ದು, ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ.

ಮೃತರನ್ನು ಚಿಂತಾಮಣಿ ತಾಲ್ಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೋಕೇಶ, ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಹಿತಿ ಪ್ರಕಾರ ಅಡುಗೆ ಕೆಲಸಕ್ಕಾಗಿ ಒಟ್ಟು ಐವರು ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಬಾವಿ ಆಳವಾಗಿದ್ದರಿಂದ ಕಾರಿನೊಳಗೆ ಮೂವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ಬಾವಿಯಲ್ಲಿ ಬಿದ್ದಿದ್ದ ಕಾರನ್ನು ಕ್ರೇನ್‌ ಮೂಲಕ ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಪಿಲೇರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 mins ago

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

9 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

9 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

11 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

11 hours ago