ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು: ಮೂವರು ಮೃತ್ಯು

ಉತ್ತರ ಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ಭಾನುವಾರ ಬೆಳಿಗ್ಗೆ ವಿಚಾರ ಬೆಳಕಿಗೆ ಬಂದಿದೆ.

ಘಟನೆಯಲ್ಲಿ ಮೃತಪಟ್ಟವರನ್ನು ವಿವೇಕ್ ಮತ್ತು ಅಮಿತ್ ಎನ್ನಲಾಗಿದ್ದು ಇನ್ನೋರ್ವನ ಗುರುತು ಪತ್ತೆಯಾಗಿಲ್ಲ.

ವಿವೇಕ್ ಹಾಗೂ ಅಮಿತ್ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಲು ಶನಿವಾರ ಬಾಡಿಗೆ ಕಾರೊಂದನ್ನು ಗೊತ್ತುಪಡಿಸಿ ಗುರುಗ್ರಾಮದಿಂದ ಉತ್ತರಪ್ರದೇಶದ ಬರೇಲಿಗೆ ಹೊರಟಿದ್ದರು. ಈ ವೇಳೆ ಮಾರ್ಗ ಸರಿಯಾಗಿ ಗೊತ್ತಿರದ ಕಾರಣ ಚಾಲಕ ಗೂಗಲ್ ಮ್ಯಾಪ್ ಮೊರೆ ಹೋಗಿದ್ದು ಅದರಂತೆ ಬರೇಲಿ ಸಮೀಪದ ನಿರ್ಮಾಣ ಹಂತದ ಸೇತುವೆಯ ದಾರಿ ತೋರಿಸಿದೆ ಅದರಂತೆ ಕಾರು ಚಾಲಕ ಅದೇ ಮಾರ್ಗವನ್ನು ಅನುಸರಿಸಿಕೊಂಡು ಹೋಗಿದ್ದಾನೆ ಆದರೆ ಸೇತುವೆ ಅಪೂರ್ಣಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಸುಮಾರು ಐವತ್ತು ಅಡಿ ಆಳದ ರಾಮಗಂಗಾ ನದಿಗೆ ಬಿದ್ದಿದೆ ಅಷ್ಟೋತ್ತಿಗಾಗಲೇ ರಾತ್ರಿಯಾಗಿದ್ದ ಕಾರಣ ವಿಚಾರ ಯಾರಿಗೂ ಗೊತ್ತಾಗಿಲ್ಲ, ಮರುದಿನ ಭಾನುವಾರ ಬೆಳಿಗ್ಗೆ ಅಲ್ಲಿನ ಸ್ಥಳೀಯರು ನದಿಗೆ ಬಿದ್ದಿರುವ ಕಾರೊಂದನ್ನು ಗಮನಿಸಿದ್ದಾರೆ ಬಳಿಕ ಕಾರಿನ ಬಳಿ ತೆರಳಿದ್ದಾರೆ ಈ ವೇಳೆ ಕಾರಿನಲ್ಲಿ ಮೂವರು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬದೌನ್ ಪೊಲೀಸರು, ಉತ್ತರ ಪ್ರದೇಶದ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು | ಟ್ರೆಕ್ಕಿಂಗ್ ಹೊರಟಿದ್ದ 36 ವರ್ಷದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…

2 hours ago

ಮಹದೇಶ್ವರ ಬೆಟ್ಟ | ರಸ್ತೆಬದಿಯಲ್ಲೇ ಮತ್ತೆ ಚಿರತೆ ಪ್ರತ್ಯಕ್ಷ ; ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…

2 hours ago

ಮಾಲ್ದಾರೆ : ರಸ್ತೆ ಕಾಮಗಾರಿ ಬಳಿಕ ಸಿಮೆಂಟ್ ಚೀಲಗಳ ತ್ಯಾಜ್ಯ ; ಪಂಚಾಯಿತಿ ವಾಹನ ದುರುಪಯೋಗ ಆರೋಪ

ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…

3 hours ago

ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ

ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…

3 hours ago

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

5 hours ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

5 hours ago