ದೇಶ- ವಿದೇಶ

ಸಜ್ಜನ್‌ ಕುಮಾರ್‌ ವಿರುದ್ಧದ ಪ್ರಕರಣ: ಫೆ.25ಕ್ಕೆ ಅಂತಿಮ ತೀರ್ಪು ಪ್ರಕಟ

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್‌ ಕುಮಾರ್‌ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್‌ ಕಾಯ್ದಿರಿಸಿದ್ದು, ಫೆ.25ಕ್ಕೆ ಅಂತಿಮವಾಗಿ ತೀರ್ಪು ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ದೆಹಲಿ ಹೈಕೋರ್ಟ್‌ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಸಜ್ಜನ್‌ ಕುಮಾರ್‌ ಅವರನ್ನು ದೋಷಿ ಎಂದು ಫೆ.12 ರಂದು ತೀರ್ಪು ಪ್ರಕಟಿಸಿತ್ತು. ಆದರೆ ಅವರಿಗೆ ಮರಣ ದಂಡನೆ ವಿಧಿಸಬೇಕೆಂದು ಪ್ರಾಸಿಕ್ಯೂಷನ್‌ ನ್ಯಾಯಾಲಯವನ್ನು ಕೋರಿತ್ತು.

ಈ ಕುರಿತು ಇಂದು(ಫೆಬ್ರವರಿ.21) ದೆಹಲಿ ಹೈಕೋರ್ಟ್‌ ಶಿಕ್ಷೆಯ ಬಗ್ಗೆ ವಾದ-ಪ್ರತಿವಾದಗಳನ್ನು ಆಲಿಸಿ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ.25 ಪ್ರಕಟಿಸಲಾಗುವುದು ಎಂದು ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

1984ರ ನವೆಂಬರ್‌ 1 ರಂದು ಸಿಖ್‌ ವಿರೋಧಿ ದಂಗೆಯ ವೇಳೆ ಸರಸ್ವತಿ ವಿಹಾರ್‌ ಬಳಿ ಜಸ್ವಂತ್‌ ಸಿಂಗ್‌ ಮತ್ತು ಅವರ ಮಗ ತರುಣ್‌ದೀಪ್‌ ಸಿಂಗ್‌ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್‌ ಕುಮಾರ್‌ ಅವರನ್ನು ಮುಖ್ಯ ಆರೋಪಿ ಎಂದು ಬಂಧಿಸಲಾಗಿತ್ತು.

ಈ ದಾಳಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳಲು ಮಾರಕಾಸ್ತ್ರಗಳನ್ನು ಹಿಡಿದಿದ್ದ ಗುಂಪು, ಸಿಖ್‌ ಸಮುದಾಯದವರಿಗೆ ಸೇರಿದ ಸ್ಥಳಗಳಲ್ಲಿ ಲೂಟಿ ಮಾಡಿ, ಗಲಭೆ ಸೃಷ್ಟಿಸಿ ಅಪಾರ ಹಾನಿಗೆ ಕಾರಣವಾಗಿತ್ತು. ಆ ವೇಳೆ ಮನೆಗಳಿಗೆ ನುಗ್ಗಿದ ಉದ್ರಿಕ್ತರು, ಪತಿ ಮತ್ತು ಮಗನನ್ನು ಹತ್ಯೆ ಮಾಡಿದ್ದರು. ಆದರೆ ಈ ಪ್ರಕರಣದ ಬಗ್ಗೆ ಜಸ್ವಂತ್‌ ಪತ್ನಿ ಮನೆಗೆ ನುಗ್ಗಿ ಲೂಟ ಮಾಡಿದಲ್ಲದೇ ಬೆಂಕಿ ಹಚ್ಚಿದ್ದರು ಎಂದು ಸಾಕ್ಷಿ ಹೇಳಿರುವುದು ಪ್ರಾಸಿಕ್ಯೂಷನ್‌ ಆರೋಪ ಪಟ್ಟಿಯಲ್ಲಿ ದಾಖಲಾಗಿದೆ.

ಇನ್ನು ಸಜ್ಜನ್‌ ಕುಮಾರ್‌ ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ತಿಳಿಸಿದ್ದ ನ್ಯಾಯಾಲಯ 2021 ರ ಡಿಸೆಂಬರ್‌ 16 ರಂದು ಈ ಪ್ರಕರಣದಲ್ಲಿ ಸಜ್ಜನ್‌ ಕುಮಾರ್‌ ವಿರುದ್ಧ ಆರೋಪಿಸಿತ್ತು.

ಅರ್ಚನ ಎಸ್‌ ಎಸ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago