ದೇಶ- ವಿದೇಶ

ಸಜ್ಜನ್‌ ಕುಮಾರ್‌ ವಿರುದ್ಧದ ಪ್ರಕರಣ: ಫೆ.25ಕ್ಕೆ ಅಂತಿಮ ತೀರ್ಪು ಪ್ರಕಟ

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್‌ ಕುಮಾರ್‌ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್‌ ಕಾಯ್ದಿರಿಸಿದ್ದು, ಫೆ.25ಕ್ಕೆ ಅಂತಿಮವಾಗಿ ತೀರ್ಪು ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ದೆಹಲಿ ಹೈಕೋರ್ಟ್‌ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಸಜ್ಜನ್‌ ಕುಮಾರ್‌ ಅವರನ್ನು ದೋಷಿ ಎಂದು ಫೆ.12 ರಂದು ತೀರ್ಪು ಪ್ರಕಟಿಸಿತ್ತು. ಆದರೆ ಅವರಿಗೆ ಮರಣ ದಂಡನೆ ವಿಧಿಸಬೇಕೆಂದು ಪ್ರಾಸಿಕ್ಯೂಷನ್‌ ನ್ಯಾಯಾಲಯವನ್ನು ಕೋರಿತ್ತು.

ಈ ಕುರಿತು ಇಂದು(ಫೆಬ್ರವರಿ.21) ದೆಹಲಿ ಹೈಕೋರ್ಟ್‌ ಶಿಕ್ಷೆಯ ಬಗ್ಗೆ ವಾದ-ಪ್ರತಿವಾದಗಳನ್ನು ಆಲಿಸಿ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ.25 ಪ್ರಕಟಿಸಲಾಗುವುದು ಎಂದು ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

1984ರ ನವೆಂಬರ್‌ 1 ರಂದು ಸಿಖ್‌ ವಿರೋಧಿ ದಂಗೆಯ ವೇಳೆ ಸರಸ್ವತಿ ವಿಹಾರ್‌ ಬಳಿ ಜಸ್ವಂತ್‌ ಸಿಂಗ್‌ ಮತ್ತು ಅವರ ಮಗ ತರುಣ್‌ದೀಪ್‌ ಸಿಂಗ್‌ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್‌ ಕುಮಾರ್‌ ಅವರನ್ನು ಮುಖ್ಯ ಆರೋಪಿ ಎಂದು ಬಂಧಿಸಲಾಗಿತ್ತು.

ಈ ದಾಳಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳಲು ಮಾರಕಾಸ್ತ್ರಗಳನ್ನು ಹಿಡಿದಿದ್ದ ಗುಂಪು, ಸಿಖ್‌ ಸಮುದಾಯದವರಿಗೆ ಸೇರಿದ ಸ್ಥಳಗಳಲ್ಲಿ ಲೂಟಿ ಮಾಡಿ, ಗಲಭೆ ಸೃಷ್ಟಿಸಿ ಅಪಾರ ಹಾನಿಗೆ ಕಾರಣವಾಗಿತ್ತು. ಆ ವೇಳೆ ಮನೆಗಳಿಗೆ ನುಗ್ಗಿದ ಉದ್ರಿಕ್ತರು, ಪತಿ ಮತ್ತು ಮಗನನ್ನು ಹತ್ಯೆ ಮಾಡಿದ್ದರು. ಆದರೆ ಈ ಪ್ರಕರಣದ ಬಗ್ಗೆ ಜಸ್ವಂತ್‌ ಪತ್ನಿ ಮನೆಗೆ ನುಗ್ಗಿ ಲೂಟ ಮಾಡಿದಲ್ಲದೇ ಬೆಂಕಿ ಹಚ್ಚಿದ್ದರು ಎಂದು ಸಾಕ್ಷಿ ಹೇಳಿರುವುದು ಪ್ರಾಸಿಕ್ಯೂಷನ್‌ ಆರೋಪ ಪಟ್ಟಿಯಲ್ಲಿ ದಾಖಲಾಗಿದೆ.

ಇನ್ನು ಸಜ್ಜನ್‌ ಕುಮಾರ್‌ ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ತಿಳಿಸಿದ್ದ ನ್ಯಾಯಾಲಯ 2021 ರ ಡಿಸೆಂಬರ್‌ 16 ರಂದು ಈ ಪ್ರಕರಣದಲ್ಲಿ ಸಜ್ಜನ್‌ ಕುಮಾರ್‌ ವಿರುದ್ಧ ಆರೋಪಿಸಿತ್ತು.

ಅರ್ಚನ ಎಸ್‌ ಎಸ್

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

1 hour ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

2 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

2 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

3 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

3 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

3 hours ago