ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ನ ಮಾಜಿ ಸಂಸದ ಸಜ್ಜನ್ ಕುಮಾರ್ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದ್ದು, ಫೆ.25ಕ್ಕೆ ಅಂತಿಮವಾಗಿ ತೀರ್ಪು ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ದೆಹಲಿ ಹೈಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ಫೆ.12 ರಂದು ತೀರ್ಪು ಪ್ರಕಟಿಸಿತ್ತು. ಆದರೆ ಅವರಿಗೆ ಮರಣ ದಂಡನೆ ವಿಧಿಸಬೇಕೆಂದು ಪ್ರಾಸಿಕ್ಯೂಷನ್ ನ್ಯಾಯಾಲಯವನ್ನು ಕೋರಿತ್ತು.
ಈ ಕುರಿತು ಇಂದು(ಫೆಬ್ರವರಿ.21) ದೆಹಲಿ ಹೈಕೋರ್ಟ್ ಶಿಕ್ಷೆಯ ಬಗ್ಗೆ ವಾದ-ಪ್ರತಿವಾದಗಳನ್ನು ಆಲಿಸಿ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ.25 ಪ್ರಕಟಿಸಲಾಗುವುದು ಎಂದು ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
1984ರ ನವೆಂಬರ್ 1 ರಂದು ಸಿಖ್ ವಿರೋಧಿ ದಂಗೆಯ ವೇಳೆ ಸರಸ್ವತಿ ವಿಹಾರ್ ಬಳಿ ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣ್ದೀಪ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರನ್ನು ಮುಖ್ಯ ಆರೋಪಿ ಎಂದು ಬಂಧಿಸಲಾಗಿತ್ತು.
ಈ ದಾಳಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳಲು ಮಾರಕಾಸ್ತ್ರಗಳನ್ನು ಹಿಡಿದಿದ್ದ ಗುಂಪು, ಸಿಖ್ ಸಮುದಾಯದವರಿಗೆ ಸೇರಿದ ಸ್ಥಳಗಳಲ್ಲಿ ಲೂಟಿ ಮಾಡಿ, ಗಲಭೆ ಸೃಷ್ಟಿಸಿ ಅಪಾರ ಹಾನಿಗೆ ಕಾರಣವಾಗಿತ್ತು. ಆ ವೇಳೆ ಮನೆಗಳಿಗೆ ನುಗ್ಗಿದ ಉದ್ರಿಕ್ತರು, ಪತಿ ಮತ್ತು ಮಗನನ್ನು ಹತ್ಯೆ ಮಾಡಿದ್ದರು. ಆದರೆ ಈ ಪ್ರಕರಣದ ಬಗ್ಗೆ ಜಸ್ವಂತ್ ಪತ್ನಿ ಮನೆಗೆ ನುಗ್ಗಿ ಲೂಟ ಮಾಡಿದಲ್ಲದೇ ಬೆಂಕಿ ಹಚ್ಚಿದ್ದರು ಎಂದು ಸಾಕ್ಷಿ ಹೇಳಿರುವುದು ಪ್ರಾಸಿಕ್ಯೂಷನ್ ಆರೋಪ ಪಟ್ಟಿಯಲ್ಲಿ ದಾಖಲಾಗಿದೆ.
ಇನ್ನು ಸಜ್ಜನ್ ಕುಮಾರ್ ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ತಿಳಿಸಿದ್ದ ನ್ಯಾಯಾಲಯ 2021 ರ ಡಿಸೆಂಬರ್ 16 ರಂದು ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ವಿರುದ್ಧ ಆರೋಪಿಸಿತ್ತು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…