ದೇಶ- ವಿದೇಶ

ಜನಗಣತಿಯೊಂದಿಗೆ ಜಾತಿ ಗಣತಿ : ಕೇಂದ್ರದ ಘೋಷಣೆ

ನವದೆಹಲಿ: ದೇಶದಲ್ಲಿ ಶೀಘ್ರದಲ್ಲೇ ನಡೆಯಲಾಗುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಕುರಿತು ಬುಧವಾರ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನ್‌ ವೈಷ್ಣವ್‌, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ರಾಜಕೀಯ ಲಾಭಕ್ಕಾಗಿ ಜಾತಿ ಸಮೀಕ್ಷೆಗಳನ್ನು ಬಳಸುತ್ತಿರುವ ವಿರೋಧ ಪಕ್ಷಗಳನ್ನು ಟೀಕಿಸಿದ ಕೇಂದ್ರ, ಮುಂಬರುವ ಜನಗಣತಿಯಲ್ಲಿ ಜಾತಿ ದತ್ತಾಂಶವನ್ನು ಸೇರಿಸುವುದಾಗಿ ಘೋಷಿಸಿದೆ.

ಇದನ್ನೂ ಓದಿ:- ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಸಿಎಂ ಸಿದ್ದರಾಮಯ್ಯ

2010ರಲ್ಲೇ ಕಾಂಗ್ರೆಸ್‌ ಸರ್ಕಾರವು ಜಾತಿ ಗಣತಿಯನ್ನು ವಿರೋಧಿಸಿತ್ತು. ಅಂದು ಬಹುತೇಕ ರಾಜಕೀಯ ಪಕ್ಷಗಳು ಜಾತಿ ಗಣತಿ ಪರವಾಗಿದ್ದವು, ಹೀಗಿದ್ದರೂ, ಅಂದಿನ ಕಾಂಗ್ರೆಸ್‌ ಗಣತಿ ನಡೆಸಲಿಲ್ಲ. ಇವೆಲ್ಲವನ್ನೂ ಗಮನಿಸಿದರೆ ಕಾಂಗ್ರೆಸ್‌ ಮತ್ತು ಅದರ ಇಂಡಿ ಒಕ್ಕೂಟದ ಪಕ್ಷಗಳು ಜಾತಿ ಗಣತಿಯನ್ನು ಒಂದು ಅಸ್ತ್ರವನ್ನಾಗಿಯೇ ಬಳಸಿಕೊಂಡು ಬರುತ್ತಿದ್ದಾರೆ ಎಂದು ಅಶ್ವಿನ್ ವೈಷ್ಣನ್‌ ‌ ಆರೋಪಿಸಿದರು.

ಕೆಲ ರಾಜ್ಯಗಳಲ್ಲಿ ಜಾತಿ ಗಣತಿ ಹಾಗೂ ಸಮೀಕ್ಷೆ ನಡೆದಿದೆ. ಇನ್ನೂ ಕೆಲವೆಡೆ ಕೇವಲ ರಾಜಕೀಯ ಉದ್ದೇಶದಿಂದ ಅವೈಜ್ಞಾನಿಕವಾಗಿ ಸಮೀಕ್ಷೆ ಕೈಗೊಂಡಿವೆ. ಇವೆಲ್ಲೂ ಸಮಾಜದಲ್ಲಿ ಸಂದೇಹ ಮೂಡಿಸುತ್ತದೆ. ರಾಜಕೀಯ ಉದ್ದೇಶದಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗಬಾರದು. ಇದನ್ನು ಖಾತ್ರಿಪಡಿಸಿಕೊಳ್ಳವ ನಿಟ್ಟಿನಲ್ಲಿ ಜನ ಗಣತಿಯಲ್ಲಿ ಜಾತಿ ಗಣತಿಯ ಮಾಹಿತಿಯನ್ನೂ ದಾಖಲಿಸಲಾಗುವುದು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

9 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

9 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

9 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

10 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

10 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

10 hours ago