ದೇಶ- ವಿದೇಶ

ಜನಗಣತಿಯೊಂದಿಗೆ ಜಾತಿ ಗಣತಿ : ಕೇಂದ್ರದ ಘೋಷಣೆ

ನವದೆಹಲಿ: ದೇಶದಲ್ಲಿ ಶೀಘ್ರದಲ್ಲೇ ನಡೆಯಲಾಗುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಕುರಿತು ಬುಧವಾರ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನ್‌ ವೈಷ್ಣವ್‌, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ರಾಜಕೀಯ ಲಾಭಕ್ಕಾಗಿ ಜಾತಿ ಸಮೀಕ್ಷೆಗಳನ್ನು ಬಳಸುತ್ತಿರುವ ವಿರೋಧ ಪಕ್ಷಗಳನ್ನು ಟೀಕಿಸಿದ ಕೇಂದ್ರ, ಮುಂಬರುವ ಜನಗಣತಿಯಲ್ಲಿ ಜಾತಿ ದತ್ತಾಂಶವನ್ನು ಸೇರಿಸುವುದಾಗಿ ಘೋಷಿಸಿದೆ.

ಇದನ್ನೂ ಓದಿ:- ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಸಿಎಂ ಸಿದ್ದರಾಮಯ್ಯ

2010ರಲ್ಲೇ ಕಾಂಗ್ರೆಸ್‌ ಸರ್ಕಾರವು ಜಾತಿ ಗಣತಿಯನ್ನು ವಿರೋಧಿಸಿತ್ತು. ಅಂದು ಬಹುತೇಕ ರಾಜಕೀಯ ಪಕ್ಷಗಳು ಜಾತಿ ಗಣತಿ ಪರವಾಗಿದ್ದವು, ಹೀಗಿದ್ದರೂ, ಅಂದಿನ ಕಾಂಗ್ರೆಸ್‌ ಗಣತಿ ನಡೆಸಲಿಲ್ಲ. ಇವೆಲ್ಲವನ್ನೂ ಗಮನಿಸಿದರೆ ಕಾಂಗ್ರೆಸ್‌ ಮತ್ತು ಅದರ ಇಂಡಿ ಒಕ್ಕೂಟದ ಪಕ್ಷಗಳು ಜಾತಿ ಗಣತಿಯನ್ನು ಒಂದು ಅಸ್ತ್ರವನ್ನಾಗಿಯೇ ಬಳಸಿಕೊಂಡು ಬರುತ್ತಿದ್ದಾರೆ ಎಂದು ಅಶ್ವಿನ್ ವೈಷ್ಣನ್‌ ‌ ಆರೋಪಿಸಿದರು.

ಕೆಲ ರಾಜ್ಯಗಳಲ್ಲಿ ಜಾತಿ ಗಣತಿ ಹಾಗೂ ಸಮೀಕ್ಷೆ ನಡೆದಿದೆ. ಇನ್ನೂ ಕೆಲವೆಡೆ ಕೇವಲ ರಾಜಕೀಯ ಉದ್ದೇಶದಿಂದ ಅವೈಜ್ಞಾನಿಕವಾಗಿ ಸಮೀಕ್ಷೆ ಕೈಗೊಂಡಿವೆ. ಇವೆಲ್ಲೂ ಸಮಾಜದಲ್ಲಿ ಸಂದೇಹ ಮೂಡಿಸುತ್ತದೆ. ರಾಜಕೀಯ ಉದ್ದೇಶದಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗಬಾರದು. ಇದನ್ನು ಖಾತ್ರಿಪಡಿಸಿಕೊಳ್ಳವ ನಿಟ್ಟಿನಲ್ಲಿ ಜನ ಗಣತಿಯಲ್ಲಿ ಜಾತಿ ಗಣತಿಯ ಮಾಹಿತಿಯನ್ನೂ ದಾಖಲಿಸಲಾಗುವುದು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

11 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

11 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

12 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

12 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

12 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

13 hours ago