ದೇಶ- ವಿದೇಶ

ಜನಗಣತಿಯೊಂದಿಗೆ ಜಾತಿ ಗಣತಿ : ಕೇಂದ್ರದ ಘೋಷಣೆ

ನವದೆಹಲಿ: ದೇಶದಲ್ಲಿ ಶೀಘ್ರದಲ್ಲೇ ನಡೆಯಲಾಗುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಕುರಿತು ಬುಧವಾರ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನ್‌ ವೈಷ್ಣವ್‌, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ರಾಜಕೀಯ ಲಾಭಕ್ಕಾಗಿ ಜಾತಿ ಸಮೀಕ್ಷೆಗಳನ್ನು ಬಳಸುತ್ತಿರುವ ವಿರೋಧ ಪಕ್ಷಗಳನ್ನು ಟೀಕಿಸಿದ ಕೇಂದ್ರ, ಮುಂಬರುವ ಜನಗಣತಿಯಲ್ಲಿ ಜಾತಿ ದತ್ತಾಂಶವನ್ನು ಸೇರಿಸುವುದಾಗಿ ಘೋಷಿಸಿದೆ.

ಇದನ್ನೂ ಓದಿ:- ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಸಿಎಂ ಸಿದ್ದರಾಮಯ್ಯ

2010ರಲ್ಲೇ ಕಾಂಗ್ರೆಸ್‌ ಸರ್ಕಾರವು ಜಾತಿ ಗಣತಿಯನ್ನು ವಿರೋಧಿಸಿತ್ತು. ಅಂದು ಬಹುತೇಕ ರಾಜಕೀಯ ಪಕ್ಷಗಳು ಜಾತಿ ಗಣತಿ ಪರವಾಗಿದ್ದವು, ಹೀಗಿದ್ದರೂ, ಅಂದಿನ ಕಾಂಗ್ರೆಸ್‌ ಗಣತಿ ನಡೆಸಲಿಲ್ಲ. ಇವೆಲ್ಲವನ್ನೂ ಗಮನಿಸಿದರೆ ಕಾಂಗ್ರೆಸ್‌ ಮತ್ತು ಅದರ ಇಂಡಿ ಒಕ್ಕೂಟದ ಪಕ್ಷಗಳು ಜಾತಿ ಗಣತಿಯನ್ನು ಒಂದು ಅಸ್ತ್ರವನ್ನಾಗಿಯೇ ಬಳಸಿಕೊಂಡು ಬರುತ್ತಿದ್ದಾರೆ ಎಂದು ಅಶ್ವಿನ್ ವೈಷ್ಣನ್‌ ‌ ಆರೋಪಿಸಿದರು.

ಕೆಲ ರಾಜ್ಯಗಳಲ್ಲಿ ಜಾತಿ ಗಣತಿ ಹಾಗೂ ಸಮೀಕ್ಷೆ ನಡೆದಿದೆ. ಇನ್ನೂ ಕೆಲವೆಡೆ ಕೇವಲ ರಾಜಕೀಯ ಉದ್ದೇಶದಿಂದ ಅವೈಜ್ಞಾನಿಕವಾಗಿ ಸಮೀಕ್ಷೆ ಕೈಗೊಂಡಿವೆ. ಇವೆಲ್ಲೂ ಸಮಾಜದಲ್ಲಿ ಸಂದೇಹ ಮೂಡಿಸುತ್ತದೆ. ರಾಜಕೀಯ ಉದ್ದೇಶದಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗಬಾರದು. ಇದನ್ನು ಖಾತ್ರಿಪಡಿಸಿಕೊಳ್ಳವ ನಿಟ್ಟಿನಲ್ಲಿ ಜನ ಗಣತಿಯಲ್ಲಿ ಜಾತಿ ಗಣತಿಯ ಮಾಹಿತಿಯನ್ನೂ ದಾಖಲಿಸಲಾಗುವುದು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago