Mysore
27
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ಸೋಮವಾರಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ CWMA ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ CWRC ಸಭೆಗಳು ನಡೆಯಲಿರುವುದನ್ನು ನ್ಯಾಯಪೀಠ ಪರಿಗಣಿಸಿದೆ.

ಈ ಸಭೆಗಳಲ್ಲಿ ಹೊರಬರುವ ಹೊಸ ಆದೇಶಗಳು ಮತ್ತು ಶಿಫಾರಸುಗಳನ್ನು ಗಮನಿಸಿದ ಬಳಿಕವೇ ಪ್ರಕರಣದ ವಿಚಾರಣೆಯನ್ನು ಮುಂದುವರಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಹೀಗಾಗಿ, ಈಗ ಎಲ್ಲರ ಚಿತ್ತ CWMA ಮತ್ತು CWRC ಸಭೆಗಳ ನಿರ್ಧಾರಗಳತ್ತ ನೆಟ್ಟಿದೆ.

Tags:
error: Content is protected !!